ಗಡಿ ವಲಸೆ– ತಿದ್ದುಪಡಿಗೆ ಆಗ್ರಹ
ರನ್ನ ಮಂಟಪ, ಮಧುರಚೆನ್ನ ವೇದಿಕೆ, ಮುಧೋಳ, ಜೂನ್ 5–ಭಾಷಾವಾರು ಪ್ರಾಂತ್ಯ ವಿಂಗಡಣೆ ನಂತರ ಉದ್ಭವಿಸಿರುವ ಗಡಿವಲಸೆ, ಮತ್ತಿತರ ಸಾಂಸ್ಕೃತಿಕ, ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಿಗೂ ಅನ್ವಯಿಸುವಂತಹ ರಾಷ್ಟ್ರೀಯ ನೀತಿಯನ್ನು ರೂಪಿಸಲು ರಾಜ್ಯಾಂಗದಲ್ಲಿ ಅಗತ್ಯ ತಿದ್ದುಪಡಿ ಆಗಬೇಕು ಎಂದು ಅಖಿಲ ಭಾರತ 64ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ ಮೂಲಕ ಒತ್ತಾಯಿಸಿದೆ.