ಕೇಂದ್ರದ ಮಾಜಿ ಸಚಿವ ಬಿ. ಶಂಕರಾ ನಂದ ಅವರ ನಿವಾಸದಲ್ಲಿ ಇಂದು ರಾತ್ರಿ ಎರಡು ಸುತ್ತು ಮಾತುಕತೆ ನಡೆಸಿದ ನಾಯಕರು ನಾಳೆ ಚರ್ಚೆ ಮುಂದುವರಿಸಲು ನಿರ್ಧರಿಸಿದರು. ನೂತನ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಅಧ್ಯಕ್ಷ ಹಾಗೂ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರಿಗೆ ನಾಳೆ ನೀಡಲಾಗುವುದು. ಅಧ್ಯಕ್ಷ ಸ್ಥಾನಕ್ಕೆ ಜಾಫರ್ ಷರೀಫ್, ಶಂಕರಾನಂದ, ಎಸ್.ಎಂ.ಕೃಷ್ಣ, ಎಂ.ರಾಜಶೇಖರಮೂರ್ತಿ, ಬಿ.ಕೆ.ಗುಡದಿನ್ನಿ, ಡಿ.ಕೆ.ನಾಯ್ಕರ್, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಹೆಸರುಗಳು ಪ್ರಸ್ತಾಪಕ್ಕೆ ಬಂದಿವೆ ಎಂದು ಮೂಲಗಳು ಹೇಳಿವೆ.