<p><strong>ಜೆಎಂಎಂ ಲಂಚ ಪ್ರಕರಣ: ವಿಶೇಷ ಕೋರ್ಟಿನಲ್ಲಿ ನ. 4ರಿಂದ ವಿಚಾರಣೆ</strong></p>.<p>ನವದೆಹಲಿ, ಸೆ. 25 (ಯುಎನ್ಐ, ಪಿಟಿಐ)– ಜೆಎಂಎಂ ಲಂಚ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಹಾಗೂ ಇತರ 19 ಮಂದಿಯ ವಿರುದ್ಧ ನಿಯೋಜಿತ ಸಿಬಿಐ ನ್ಯಾಯಾಲಯ ಇಂದು ದೋಷಾರೋಪ ನಿಗದಿಪಡಿಸಿತು.</p>.<p>ಪ್ರಧಾನಿಯಾಗಿದ್ದವರು ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿ, ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲು. ಅವರು ವಿಚಾರಣೆ ಎದುರಿಸುತ್ತಿರುವ ಎರಡನೇ ಕ್ರಿಮಿನಲ್ ಪ್ರಕರಣ ಇದಾಗಿದ್ದು, ಲಕ್ಕೂಭಾಯಿ ಪಾಠಕ್ ವಂಚನೆ ಪ್ರಕರಣದಲ್ಲೂ ನರಸಿಂಹರಾವ್ ವಿಚಾರಣೆ ಎದುರಿಸುತ್ತಿದ್ದಾರೆ.</p>.<p><strong>ಸರ್ಕಾರಿ ಗೌರವದೊಂದಿಗೆ ಇಂದು ವೆಂಕಟರಾಮಯ್ಯ ಅಂತ್ಯಕ್ರಿಯೆ</strong></p>.<p>ಬೆಂಗಳೂರು, ಸೆ. 25– ನಿನ್ನೆ ಮಧ್ಯರಾತ್ರಿ ನಿಧನರಾದ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ.ಎಸ್.ವೆಂಕಟರಾಮಯ್ಯ ಅವರ ಅಂತಿಮ ಸಂಸ್ಕಾರವು ನಾಳೆ ರಾಜ್ಯ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ತಣ್ಣೂರಿನಲ್ಲಿ<br />ನಡೆಯಲಿದೆ.</p>.<p>ವೆಂಕಟರಾಮಯ್ಯ ಅವರ ಮನೆಗೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಈ ವಿಷಯ ತಿಳಿಸಿದರು. ದಿವಂಗತರ ಗೌರವಾರ್ಥ ರಾಜ್ಯ ಸರ್ಕಾರ ಇಂದು ಶೋಕಾಚರಣೆ ಘೋಷಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆಎಂಎಂ ಲಂಚ ಪ್ರಕರಣ: ವಿಶೇಷ ಕೋರ್ಟಿನಲ್ಲಿ ನ. 4ರಿಂದ ವಿಚಾರಣೆ</strong></p>.<p>ನವದೆಹಲಿ, ಸೆ. 25 (ಯುಎನ್ಐ, ಪಿಟಿಐ)– ಜೆಎಂಎಂ ಲಂಚ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಹಾಗೂ ಇತರ 19 ಮಂದಿಯ ವಿರುದ್ಧ ನಿಯೋಜಿತ ಸಿಬಿಐ ನ್ಯಾಯಾಲಯ ಇಂದು ದೋಷಾರೋಪ ನಿಗದಿಪಡಿಸಿತು.</p>.<p>ಪ್ರಧಾನಿಯಾಗಿದ್ದವರು ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿ, ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲು. ಅವರು ವಿಚಾರಣೆ ಎದುರಿಸುತ್ತಿರುವ ಎರಡನೇ ಕ್ರಿಮಿನಲ್ ಪ್ರಕರಣ ಇದಾಗಿದ್ದು, ಲಕ್ಕೂಭಾಯಿ ಪಾಠಕ್ ವಂಚನೆ ಪ್ರಕರಣದಲ್ಲೂ ನರಸಿಂಹರಾವ್ ವಿಚಾರಣೆ ಎದುರಿಸುತ್ತಿದ್ದಾರೆ.</p>.<p><strong>ಸರ್ಕಾರಿ ಗೌರವದೊಂದಿಗೆ ಇಂದು ವೆಂಕಟರಾಮಯ್ಯ ಅಂತ್ಯಕ್ರಿಯೆ</strong></p>.<p>ಬೆಂಗಳೂರು, ಸೆ. 25– ನಿನ್ನೆ ಮಧ್ಯರಾತ್ರಿ ನಿಧನರಾದ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ.ಎಸ್.ವೆಂಕಟರಾಮಯ್ಯ ಅವರ ಅಂತಿಮ ಸಂಸ್ಕಾರವು ನಾಳೆ ರಾಜ್ಯ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ತಣ್ಣೂರಿನಲ್ಲಿ<br />ನಡೆಯಲಿದೆ.</p>.<p>ವೆಂಕಟರಾಮಯ್ಯ ಅವರ ಮನೆಗೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಈ ವಿಷಯ ತಿಳಿಸಿದರು. ದಿವಂಗತರ ಗೌರವಾರ್ಥ ರಾಜ್ಯ ಸರ್ಕಾರ ಇಂದು ಶೋಕಾಚರಣೆ ಘೋಷಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>