ಬೆಂಗಳೂರು, ಜುಲೈ 26– ಕಾಡುಗಳ್ಳ ವೀರಪ್ಪನ್ ಅಪಹರಿಸಿರುವ ಅರಣ್ಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿಸುವ ಸಂಬಂಧದಲ್ಲಿ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆಗೆ ಚರ್ಚಿಸಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ, ಅರಣ್ಯ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಹಾಗೂ ಗೃಹ ಸಚಿವ ರೋಷನ್ ಬೇಗ್ ಅವರು ಚೆನ್ನೈಗೆ ತೆರಳಿದ್ದಾರೆ.