ಆದರೆ, ಮುಖ್ಯಮಂತ್ರಿ ಅವರ ಗೃಹ ಕಚೇರಿ ‘ಕೃಷ್ಣ’ದಲ್ಲಿ ಇಂದು ಬೆಳಿಗ್ಗೆ ಮೊಯಿಲಿ ಅವರನ್ನು ಭೇಟಿ ಮಾಡಿ ಬಂದ ಸಚಿವ ನಾಗೇಗೌಡ ಅವರು ‘ನನ್ನ ನಿಲುವಿನಲ್ಲಿ ಕಿಂಚಿತ್ತೂ ಬದಲಾವಣೆ ಇಲ್ಲ, ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿರುವುದರಿಂದ ಅಧಿಕಾರದಲ್ಲಿ ಮುಂದುವರೆಯಲು ಒತ್ತಾಯಿಸಬಾರದು ಎಂದು ಮುಖ್ಯಮಂತ್ರಿ ಅವರಿಗೆ ಕೋರಿದ್ದೇನೆ’ ಎಂದು ತಿಳಿಸಿದರು.