ನವದೆಹಲಿ, ಜೂನ್2(ಪಿಟಿಐ) ಶಾಸನಸಭೆ ಗಳಿಗೆ ನಡೆಯುವ ಚುನಾವಣೆಯಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿ ಕೂಟಕ್ಕೆ ಬಹುಮತ ದೊರೆಯದೆ ತ್ರಿಶಂಕು ಸ್ಥಿತಿ ಉದ್ಭವಿಸಿದಾಗ, ಸಂದಿಗ್ಧ ಮತ್ತು ಜಟಿಲ ಪರಿಸ್ಥಿತಿಗಳಲ್ಲಿ ಸಂವಿಧಾನಾತ್ಮಕ ಮುಖ್ಯಸ್ಥರು ಸಂವಿಧಾನದ ರಕ್ಷಕರಾಗಿ ಕಾರ್ಯ ನಿರ್ವಹಿಸಬೇಕು ಎಂದು ರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮಾ ಇಂದು ಇಲ್ಲಿ ಅಭಿಪ್ರಾಯಪಟ್ಟರು.