<p><strong>ಮಸೂದೆಗೆ ಒಪ್ಪಿಗೆ</strong></p>.<p><strong>ನವದೆಹಲಿ, ಜುಲೈ 19 (ಪಿಟಿಐ)–</strong> ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇ 69ರಷ್ಟು ಮೀಸಲಾತಿಯನ್ನು ಮುಂದುವರಿಸುವ ಮಸೂದೆಗೆ ರಾಷ್ಟ್ರಪತಿ ಶಂಕರ ದಯಾಳ ಶರ್ಮಾ ಅವರು ಇಂದು ತಮ್ಮ ಮಂಜೂರಾತಿ ನೀಡಿದರು.</p>.<p>ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲು ತೀರ್ಮಾನಿಸಲಾಗಿತ್ತು. ಈ ವಿಚಾರದ ಚರ್ಚೆಗೆ ನಡೆದ ಸರ್ವ ಪಕ್ಷಗಳ ಸಭೆಯೂ ಸಹಮತ ವ್ಯಕ್ತಪಡಿಸಿತ್ತು. ಮೀಸಲಾತಿಯ ಒಟ್ಟು ಪ್ರಮಾಣ ಶೇ 50ನ್ನು ಮೀರಬಾರದು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರವು ಈ ಮಸೂದೆ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ.</p>.<p><strong>ಐದು ರಾಜ್ಯಗಳಲ್ಲಿ ಪ್ರವಾಹ ಪರಿಹಾರ ಕಾರ್ಯಕ್ಕೆ ಸೇನೆ</strong></p>.<p><strong>ನವದೆಹಲಿ, ಜುಲೈ 19 (ಪಿಟಿಐ, ಯುಎನ್ಐ)–</strong> ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಮತ್ತು ಬಿಹಾರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸೇನೆಯ ತುಕಡಿಗಳನ್ನು ರವಾನಿಸಲಾಗಿದೆ.</p>.<p>ದೇಶದ ವಿವಿಧೆಡೆ ರೌದ್ರಾವತಾರ ತಾಳಿದ ಮುಂಗಾರು ಮಳೆಗೆ ಇದುವರೆಗೆ 410 ಜನ ಬಲಿಯಾಗಿದ್ದು, ಲಕ್ಷಾಂತರ ಮಂದಿ ಮನೆ ಮಾರು ಕಳೆದುಕೊಂಡಿದ್ದಾರೆ. ಕೋಟ್ಯಂತರ ಬೆಲೆಯ ಆಸ್ತಿಪಾಸ್ತಿಗೆ ನಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸೂದೆಗೆ ಒಪ್ಪಿಗೆ</strong></p>.<p><strong>ನವದೆಹಲಿ, ಜುಲೈ 19 (ಪಿಟಿಐ)–</strong> ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇ 69ರಷ್ಟು ಮೀಸಲಾತಿಯನ್ನು ಮುಂದುವರಿಸುವ ಮಸೂದೆಗೆ ರಾಷ್ಟ್ರಪತಿ ಶಂಕರ ದಯಾಳ ಶರ್ಮಾ ಅವರು ಇಂದು ತಮ್ಮ ಮಂಜೂರಾತಿ ನೀಡಿದರು.</p>.<p>ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲು ತೀರ್ಮಾನಿಸಲಾಗಿತ್ತು. ಈ ವಿಚಾರದ ಚರ್ಚೆಗೆ ನಡೆದ ಸರ್ವ ಪಕ್ಷಗಳ ಸಭೆಯೂ ಸಹಮತ ವ್ಯಕ್ತಪಡಿಸಿತ್ತು. ಮೀಸಲಾತಿಯ ಒಟ್ಟು ಪ್ರಮಾಣ ಶೇ 50ನ್ನು ಮೀರಬಾರದು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರವು ಈ ಮಸೂದೆ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ.</p>.<p><strong>ಐದು ರಾಜ್ಯಗಳಲ್ಲಿ ಪ್ರವಾಹ ಪರಿಹಾರ ಕಾರ್ಯಕ್ಕೆ ಸೇನೆ</strong></p>.<p><strong>ನವದೆಹಲಿ, ಜುಲೈ 19 (ಪಿಟಿಐ, ಯುಎನ್ಐ)–</strong> ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಮತ್ತು ಬಿಹಾರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸೇನೆಯ ತುಕಡಿಗಳನ್ನು ರವಾನಿಸಲಾಗಿದೆ.</p>.<p>ದೇಶದ ವಿವಿಧೆಡೆ ರೌದ್ರಾವತಾರ ತಾಳಿದ ಮುಂಗಾರು ಮಳೆಗೆ ಇದುವರೆಗೆ 410 ಜನ ಬಲಿಯಾಗಿದ್ದು, ಲಕ್ಷಾಂತರ ಮಂದಿ ಮನೆ ಮಾರು ಕಳೆದುಕೊಂಡಿದ್ದಾರೆ. ಕೋಟ್ಯಂತರ ಬೆಲೆಯ ಆಸ್ತಿಪಾಸ್ತಿಗೆ ನಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>