ಬೆಂಗಳೂರು, ಸೆ. 20– ಪರಿಶಿಷ್ಟರು ಹಾಗೂ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಶೇಕಡ 73ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಇಂದು ಸರ್ವಾನುಮತದ ಒಪ್ಪಿಗೆ ನೀಡಿದ ವಿಧಾನ ಮಂಡಲದ ಉಭಯ ಸದನಗಳು, ಈ ಮೀಸಲು ನೀತಿ ಜಾರಿಗೆ ತರಲು ಸಾಧ್ಯವಾಗುವಂತೆ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ತರಬೇಕೆಂದು ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನೂ ಅಂಗೀಕರಿಸಿದವು.