<p><strong>ಸಮಾನ ಪ್ರಣಾಳಿಕೆಯಲ್ಲಿ ಸ್ಪರ್ಧೆಗೆ ರಂಗ ನಿರ್ಧಾರ<br />ಹೈದರಾಬಾದ್, ಜ. 19–</strong> ಒಂದೇ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು 13 ಘಟಕ ಪಕ್ಷಗಳ ಸಂಯುಕ್ತ ರಂಗ ಇಂದು ನಿರ್ಧರಿಸಿದೆ.</p>.<p>ಇಂದು ಇಲ್ಲಿ ನಡೆದ ರಂಗದ ನಿರ್ಣಾಯಕ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಚುನಾವಣಾ ಪ್ರಣಾಳಿಕೆಯನ್ನು ಜ. 30ರಂದು ದೆಹಲಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಭೆಯ ನಂತರ ರಂಗದ ವಕ್ತಾರ ಎಸ್. ಜೈಪಾಲ್ ರೆಡ್ಡಿ ಅವರು ಪತ್ರಕರ್ತರಿಗೆ ತಿಳಿಸಿದರು.</p>.<p>ಪ್ರಣಾಳಿಕೆಯಲ್ಲಿ ಬೊಫೋರ್ಸ್ ವಿಷಯವೂ ಸೇರಿದಂತೆ ಭ್ರಷ್ಟಾಚಾರ ನಿರ್ಮೂಲನೆಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.</p>.<p><strong>ಬಿಎಸ್ಪಿ ಜತೆ ಮೈತ್ರಿಗೆ ಬಂಗಾರಪ್ಪ ನಿರ್ಧಾರ<br />ಬೆಂಗಳೂರು, ಜ. 19–</strong> ಜನತಾದಳದೊಂದಿಗೆ ಚುನಾವಣಾ ಮೈತ್ರಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ವಿಕಾಸ ಪಕ್ಷವು ಕಾನ್ಶಿರಾಂ ನೇತೃತ್ವದ ಬಹುಜನ ಸಮಾಜ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧವಾಗಿದೆ.</p>.<p>ಹೊಂದಾಣಿಕೆ ಸಂಬಂಧ ರಾಜ್ಯ ಜನತಾದಳದ ಮುಖಂಡರು ಹಾಗೂ ಬಂಗಾರಪ್ಪ ಅವರ ನಡುವೆ ಎರಡು ಸುತ್ತಿನ ಮಾತುಕತೆ ನಡೆದರೂ ಸ್ಥಾನಗಳ ಹಂಚಿಕೆ ಯಲ್ಲಿ ಎರಡೂ ಪಕ್ಷಗಳ ಮುಖಂಡರ ನಡುವೆ ಒಮ್ಮತ ಏರ್ಪಡದಿದ್ದರಿಂದ ಹೊಂದಾಣಿಕೆ ಮಾತುಕತೆ ವಿಫಲವಾಯಿತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಮಾನ ಪ್ರಣಾಳಿಕೆಯಲ್ಲಿ ಸ್ಪರ್ಧೆಗೆ ರಂಗ ನಿರ್ಧಾರ<br />ಹೈದರಾಬಾದ್, ಜ. 19–</strong> ಒಂದೇ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು 13 ಘಟಕ ಪಕ್ಷಗಳ ಸಂಯುಕ್ತ ರಂಗ ಇಂದು ನಿರ್ಧರಿಸಿದೆ.</p>.<p>ಇಂದು ಇಲ್ಲಿ ನಡೆದ ರಂಗದ ನಿರ್ಣಾಯಕ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಚುನಾವಣಾ ಪ್ರಣಾಳಿಕೆಯನ್ನು ಜ. 30ರಂದು ದೆಹಲಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಭೆಯ ನಂತರ ರಂಗದ ವಕ್ತಾರ ಎಸ್. ಜೈಪಾಲ್ ರೆಡ್ಡಿ ಅವರು ಪತ್ರಕರ್ತರಿಗೆ ತಿಳಿಸಿದರು.</p>.<p>ಪ್ರಣಾಳಿಕೆಯಲ್ಲಿ ಬೊಫೋರ್ಸ್ ವಿಷಯವೂ ಸೇರಿದಂತೆ ಭ್ರಷ್ಟಾಚಾರ ನಿರ್ಮೂಲನೆಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.</p>.<p><strong>ಬಿಎಸ್ಪಿ ಜತೆ ಮೈತ್ರಿಗೆ ಬಂಗಾರಪ್ಪ ನಿರ್ಧಾರ<br />ಬೆಂಗಳೂರು, ಜ. 19–</strong> ಜನತಾದಳದೊಂದಿಗೆ ಚುನಾವಣಾ ಮೈತ್ರಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ವಿಕಾಸ ಪಕ್ಷವು ಕಾನ್ಶಿರಾಂ ನೇತೃತ್ವದ ಬಹುಜನ ಸಮಾಜ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧವಾಗಿದೆ.</p>.<p>ಹೊಂದಾಣಿಕೆ ಸಂಬಂಧ ರಾಜ್ಯ ಜನತಾದಳದ ಮುಖಂಡರು ಹಾಗೂ ಬಂಗಾರಪ್ಪ ಅವರ ನಡುವೆ ಎರಡು ಸುತ್ತಿನ ಮಾತುಕತೆ ನಡೆದರೂ ಸ್ಥಾನಗಳ ಹಂಚಿಕೆ ಯಲ್ಲಿ ಎರಡೂ ಪಕ್ಷಗಳ ಮುಖಂಡರ ನಡುವೆ ಒಮ್ಮತ ಏರ್ಪಡದಿದ್ದರಿಂದ ಹೊಂದಾಣಿಕೆ ಮಾತುಕತೆ ವಿಫಲವಾಯಿತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>