ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆಯೇ ಬಿಎಸ್ಪಿ ಸದಸ್ಯ ಆರೀಫ್ ಮಹಮ್ಮದ್ ಖಾನ್ ಅವರು ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ಸದನದಲ್ಲಿ ಗಲಾಟೆ ಆರಂಭವಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡರು. ಬಿಎಸ್ಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಸದಸ್ಯರು ಸಭಾಧ್ಯಕ್ಷ ಪೀಠದ ಬಳಿಗೆ ತೆರಳಿ ಈ ವಿಷಯದ ಬಗ್ಗೆ ಚರ್ಚೆಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಒತ್ತಾಯಿಸಿದರು.