<p><strong>ಉಪ ಚುನಾವಣೆ: ಕಣದಲ್ಲಿಉಳಿದ ಅಭ್ಯರ್ಥಿಗಳು</strong></p>.<p><strong>ಬೆಂಗಳೂರು, ಜ. 24– </strong>ರಾಜ್ಯ ವಿಧಾನಸಭೆಗೆ ಫೆಬ್ರುವರಿ 8ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಐವರು ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಆರು ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಜನತಾ ದಳದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.</p>.<p>ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದುರಾಮನಗರ ಕ್ಷೇತ್ರದಲ್ಲಿ 7 ಅಭ್ಯರ್ಥಿಗಳು ನಾಮಪತ್ರ ವಾಪಸು ಪಡೆದರು. ಅಂತಿಮವಾಗಿ ಕಾಂಗ್ರೆಸ್ನ ಸಿ.ಎಂ. ಲಿಂಗಪ್ಪ, ಜನತಾ ದಳದ ಎಂ.ಎಚ್. ಅಮರನಾಥ್ ಅಲಿಯಾಸ್ ಅಂಬರೀಷ್, ಬಿಜೆಪಿಯ ಗಿರಿಗೌಡ ಹಾಗೂ ಪಕ್ಷೇತರರಾದ ಎ.ಬಿ. ಅನಂತರಾಮ ಮತ್ತು ಅಪ್ಪಾಜಯ್ಯ ಸ್ಪರ್ಧೆಯಲ್ಲಿದ್ದಾರೆ.</p>.<p>ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ 7 ಮಂದಿ ಇಂದು ತಮ್ಮ ನಾಮಪತ್ರಗಳನ್ನು ವಾಪಸು ಪಡೆದರು. ಅಂತಿಮವಾಗಿ ಕಾಂಗ್ರೆಸ್ನ<br />ಬಿ. ಲಕ್ಕಪ್ಪ, ಜನತಾ ದಳದ ಸಿ.ಬಿ.ಸುರೇಶ್ ಬಾಬು, ಬಿಜೆಪಿಯ ಶಂಕರಪ್ಪ, ಸಮತಾ ಪಕ್ಷದ ರಮೇಶ್ಬಾಬು, ಪಕ್ಷೇತರರಾದ ಜೆ.ಸಿ. ಮಾಧುಸ್ವಾಮಿ ಹಾಗೂ ಪ್ರಸನ್ನಕುಮಾರ ಸ್ವಾಮಿ ಸ್ಪರ್ಧೆಯಲ್ಲಿ ಉಳಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ ಚುನಾವಣೆ: ಕಣದಲ್ಲಿಉಳಿದ ಅಭ್ಯರ್ಥಿಗಳು</strong></p>.<p><strong>ಬೆಂಗಳೂರು, ಜ. 24– </strong>ರಾಜ್ಯ ವಿಧಾನಸಭೆಗೆ ಫೆಬ್ರುವರಿ 8ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಐವರು ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಆರು ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಜನತಾ ದಳದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.</p>.<p>ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದುರಾಮನಗರ ಕ್ಷೇತ್ರದಲ್ಲಿ 7 ಅಭ್ಯರ್ಥಿಗಳು ನಾಮಪತ್ರ ವಾಪಸು ಪಡೆದರು. ಅಂತಿಮವಾಗಿ ಕಾಂಗ್ರೆಸ್ನ ಸಿ.ಎಂ. ಲಿಂಗಪ್ಪ, ಜನತಾ ದಳದ ಎಂ.ಎಚ್. ಅಮರನಾಥ್ ಅಲಿಯಾಸ್ ಅಂಬರೀಷ್, ಬಿಜೆಪಿಯ ಗಿರಿಗೌಡ ಹಾಗೂ ಪಕ್ಷೇತರರಾದ ಎ.ಬಿ. ಅನಂತರಾಮ ಮತ್ತು ಅಪ್ಪಾಜಯ್ಯ ಸ್ಪರ್ಧೆಯಲ್ಲಿದ್ದಾರೆ.</p>.<p>ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ 7 ಮಂದಿ ಇಂದು ತಮ್ಮ ನಾಮಪತ್ರಗಳನ್ನು ವಾಪಸು ಪಡೆದರು. ಅಂತಿಮವಾಗಿ ಕಾಂಗ್ರೆಸ್ನ<br />ಬಿ. ಲಕ್ಕಪ್ಪ, ಜನತಾ ದಳದ ಸಿ.ಬಿ.ಸುರೇಶ್ ಬಾಬು, ಬಿಜೆಪಿಯ ಶಂಕರಪ್ಪ, ಸಮತಾ ಪಕ್ಷದ ರಮೇಶ್ಬಾಬು, ಪಕ್ಷೇತರರಾದ ಜೆ.ಸಿ. ಮಾಧುಸ್ವಾಮಿ ಹಾಗೂ ಪ್ರಸನ್ನಕುಮಾರ ಸ್ವಾಮಿ ಸ್ಪರ್ಧೆಯಲ್ಲಿ ಉಳಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>