<p><strong>ಅಧಿಕಾರಕ್ಕೆ ಕಚ್ಚಾಟ: ಪಟೇಲ್ ಎಚ್ಚರಿಕೆ</strong></p><p><strong>ಬೆಂಗಳೂರು, ಜುಲೈ 23–</strong> ಪಂಚಾಯತ್ ರಾಜ್ ಸಂಸ್ಥೆಗಳನ್ನು ಪ್ರವೇಶಿಸಿದವರಿ ಅಧಿಕಾರಶಾಹಿಯೊಂದಿಗೆ ಜಗಳ ಕಚ್ಚಾಟದಲ್ಲಿ ತೊಡಗದೆ ಸಹಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ಇಂದು ಸೂಚಿಸಿದರು.</p><p>ಪಂಚಾಯತ್ ರಾಜ್ ಸಂಸ್ಥೆಗಳಲ್ಲಿರುವವರು ಕೇವಲ ಅಧಿಕಾರಕ್ಕಾಗಿ ಕಚ್ಚಾಡುವುದಾದರೆ ಅವುಗಳ ವಿರುದ್ಧ ಕಠೋರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.</p><p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಪಂಚಾಯತ್ ಪರಿಷತ್ ಎರಡನೇ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.</p>.<p><strong>ಕಾಗದದ ಮೇಲೆಯೇ ಉಳಿದ ತನಿಖೆ</strong></p><p><strong>ಬೆಂಗಳೂರು, ಜುಲೈ 23–</strong> ಆರೋಪ ಹೊತ್ತ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ಅಥವಾ ಕ್ರಮಕ್ಕೆ ‘ಐಎಎಸ್ ಲಾಬಿ’ ತಡೆಯೊಡ್ಡುತ್ತದೆಯೇ?</p><p>ದೆಹಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಪ್ರಯದರ್ಶಿನಿ ಮಳಿಗೆಗಳನ್ನು ತೆರೆಯುವ ಹಾಗೂ ಮಳಿಗೆಗಳ ನವೀಕರಣದ ಹೆಸರಿನಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಭಾರಿ ಪ್ರಮಾಣದ ಅವ್ಯವಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ನಿಜ ಎಂದು ಅಧಿಕಾರದ ಸೂತ್ರ ಹಿಡಿದಿರುವವರೇ ಆತಂಕ ವ್ಯಕ್ತಪಡಿಸುವ ಪರಿಸ್ಥಿತಿ ಉದ್ಭವಿಸಿದೆ.</p><p>ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಡೆಸಬೇಕಾದ ತನಿಖೆಯನ್ನು ಮೂಲೆಗುಂಪು ಮಾಡಿ ಇಡೀ ಪ್ರಕರಣದ ಸದ್ದಡಗಿಸುವ ಪ್ರಕ್ರಿಯೆಯಲ್ಲಿ ‘ಐಎಎಸ್ ಲಾಬಿ’ ಭಾರಿ ಪ್ರಭಾವ ಬೀರಿದೆ ಎನ್ನುವ ಆರೋಪಕ್ಕೆ ಈಗ ಕೊರತೆ ಇಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಧಿಕಾರಕ್ಕೆ ಕಚ್ಚಾಟ: ಪಟೇಲ್ ಎಚ್ಚರಿಕೆ</strong></p><p><strong>ಬೆಂಗಳೂರು, ಜುಲೈ 23–</strong> ಪಂಚಾಯತ್ ರಾಜ್ ಸಂಸ್ಥೆಗಳನ್ನು ಪ್ರವೇಶಿಸಿದವರಿ ಅಧಿಕಾರಶಾಹಿಯೊಂದಿಗೆ ಜಗಳ ಕಚ್ಚಾಟದಲ್ಲಿ ತೊಡಗದೆ ಸಹಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ಇಂದು ಸೂಚಿಸಿದರು.</p><p>ಪಂಚಾಯತ್ ರಾಜ್ ಸಂಸ್ಥೆಗಳಲ್ಲಿರುವವರು ಕೇವಲ ಅಧಿಕಾರಕ್ಕಾಗಿ ಕಚ್ಚಾಡುವುದಾದರೆ ಅವುಗಳ ವಿರುದ್ಧ ಕಠೋರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.</p><p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಪಂಚಾಯತ್ ಪರಿಷತ್ ಎರಡನೇ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.</p>.<p><strong>ಕಾಗದದ ಮೇಲೆಯೇ ಉಳಿದ ತನಿಖೆ</strong></p><p><strong>ಬೆಂಗಳೂರು, ಜುಲೈ 23–</strong> ಆರೋಪ ಹೊತ್ತ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ಅಥವಾ ಕ್ರಮಕ್ಕೆ ‘ಐಎಎಸ್ ಲಾಬಿ’ ತಡೆಯೊಡ್ಡುತ್ತದೆಯೇ?</p><p>ದೆಹಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಪ್ರಯದರ್ಶಿನಿ ಮಳಿಗೆಗಳನ್ನು ತೆರೆಯುವ ಹಾಗೂ ಮಳಿಗೆಗಳ ನವೀಕರಣದ ಹೆಸರಿನಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಭಾರಿ ಪ್ರಮಾಣದ ಅವ್ಯವಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ನಿಜ ಎಂದು ಅಧಿಕಾರದ ಸೂತ್ರ ಹಿಡಿದಿರುವವರೇ ಆತಂಕ ವ್ಯಕ್ತಪಡಿಸುವ ಪರಿಸ್ಥಿತಿ ಉದ್ಭವಿಸಿದೆ.</p><p>ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಡೆಸಬೇಕಾದ ತನಿಖೆಯನ್ನು ಮೂಲೆಗುಂಪು ಮಾಡಿ ಇಡೀ ಪ್ರಕರಣದ ಸದ್ದಡಗಿಸುವ ಪ್ರಕ್ರಿಯೆಯಲ್ಲಿ ‘ಐಎಎಸ್ ಲಾಬಿ’ ಭಾರಿ ಪ್ರಭಾವ ಬೀರಿದೆ ಎನ್ನುವ ಆರೋಪಕ್ಕೆ ಈಗ ಕೊರತೆ ಇಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>