<p><strong>ಪ್ರತಿಪಕ್ಷಗಳಲ್ಲಿ ಮೂಡದ ಒಮ್ಮತ ಮುಂದುವರಿದ ಅನಿಶ್ಚಿತ ಸ್ಥಿತಿ</strong></p><p><strong>ನವದೆಹಲಿ, ಏ. 24–</strong> ಬಿಜೆಪಿ ನೇತೃತ್ವದ ಸರ್ಕಾರ ವಿಶ್ವಾಸಮತ ಕಳೆದುಕೊಂಡು ಪತನವಾಗಿ ಒಂದು ವಾರವಾದರೂ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಪರ್ಯಾಯ ಸರ್ಕಾರ ರಚನೆ ಮಾಡುವಲ್ಲಿ ಇನ್ನೂ ಒಮ್ಮತಕ್ಕೆ ಬರಲಾಗದ ಕಾರಣ ಅನಿಶ್ಚಿತ ಸ್ಥಿತಿ ಮುಂದುವರಿದಿದೆ.</p><p>ಸೋನಿಯಾ ಇಲ್ಲವೇ ಜ್ಯೋತಿ ಬಸು ಅವರ ನೇತೃತ್ವದಲ್ಲಿ ಪರ್ಯಾಯ ಸರ್ಕಾರ. ಈ ಪ್ರಯತ್ನದಲ್ಲಿ ವಿರೋಧಿ ಬಣ ವಿಫಲವಾದರೆ, ಅಟಲ್ ಬಿಹಾರಿ ವಾಜಪೇಯಿ ಮತ್ತೆ ಅಧಿಕಾರಕ್ಕೆ. ಇಲ್ಲವಾದರೆ ಲೋಕಸಭೆಗೆ ಮಧ್ಯಂತರ ಚುನಾವಣೆ ಅನಿವಾರ್ಯ. ಇದಿಷ್ಟು ಮಾತ್ರ ಈಗ ತೆರೆದಿಟ್ಟ ಮಾರ್ಗಗಳು.</p><p>ಆದರೆ ಪ್ರತಿಪಕ್ಷಗಳ ಬೆಂಬಲ ಗಳಿಸಲು ಮತ್ತೆ ಅವಕಾಶ ಪಡೆದಿರುವ ಕಾಂಗ್ರೆಸ್ನ ನಿನ್ನೆಯ ಪರಿಸ್ಥಿತಿಯಲ್ಲಿ ಈ ಹೊತ್ತಿನವರೆಗೆ ಯಾವುದೇ ಪ್ರಗತಿ ಕಂಡುಬಂದಂತೆ ಇಲ್ಲ. ಹೆಚ್ಚು ಕಡಿಮೆ ಕಾಂಗ್ರೆಸ್ ಪಕ್ಷ ಅಲ್ಪ<br>ಬಹುಮತದ ಸರ್ಕಾರ ರಚನೆಯ ತಂತ್ರಕ್ಕೆ ಜೋತುಬಿದ್ದಿದೆ.</p><p>***</p><p><strong>ಸಮ್ಮಿಶ್ರ ಸರ್ಕಾರ ರಚನೆ ಕಾಂಗ್ರೆಸ್ ಪರಿಶೀಲನೆ</strong></p><p><strong>ನವದೆಹಲಿ, ಏ. 24 (ಪಿಟಿಐ):</strong> ಕೇಂದ್ರದಲ್ಲಿ ಪರ್ಯಾಯ ಸರ್ಕಾರ ರಚನೆ ಕುರಿತಂತೆ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಸಹ ಪರಿಶೀಲನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್<br>ಫರ್ನಾಂಡಿಸ್ ಅವರು ಇಂದು ಇಲ್ಲಿ ತಿಳಿಸಿದರು.</p><p>ಕಾಂಗ್ರೆಸ್ ನೇತೃತ್ವದಲ್ಲಿ ರಚನೆಗೊಳ್ಳುವ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಇಂದು ಮತ್ತೆ ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರತಿಪಕ್ಷಗಳಲ್ಲಿ ಮೂಡದ ಒಮ್ಮತ ಮುಂದುವರಿದ ಅನಿಶ್ಚಿತ ಸ್ಥಿತಿ</strong></p><p><strong>ನವದೆಹಲಿ, ಏ. 24–</strong> ಬಿಜೆಪಿ ನೇತೃತ್ವದ ಸರ್ಕಾರ ವಿಶ್ವಾಸಮತ ಕಳೆದುಕೊಂಡು ಪತನವಾಗಿ ಒಂದು ವಾರವಾದರೂ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಪರ್ಯಾಯ ಸರ್ಕಾರ ರಚನೆ ಮಾಡುವಲ್ಲಿ ಇನ್ನೂ ಒಮ್ಮತಕ್ಕೆ ಬರಲಾಗದ ಕಾರಣ ಅನಿಶ್ಚಿತ ಸ್ಥಿತಿ ಮುಂದುವರಿದಿದೆ.</p><p>ಸೋನಿಯಾ ಇಲ್ಲವೇ ಜ್ಯೋತಿ ಬಸು ಅವರ ನೇತೃತ್ವದಲ್ಲಿ ಪರ್ಯಾಯ ಸರ್ಕಾರ. ಈ ಪ್ರಯತ್ನದಲ್ಲಿ ವಿರೋಧಿ ಬಣ ವಿಫಲವಾದರೆ, ಅಟಲ್ ಬಿಹಾರಿ ವಾಜಪೇಯಿ ಮತ್ತೆ ಅಧಿಕಾರಕ್ಕೆ. ಇಲ್ಲವಾದರೆ ಲೋಕಸಭೆಗೆ ಮಧ್ಯಂತರ ಚುನಾವಣೆ ಅನಿವಾರ್ಯ. ಇದಿಷ್ಟು ಮಾತ್ರ ಈಗ ತೆರೆದಿಟ್ಟ ಮಾರ್ಗಗಳು.</p><p>ಆದರೆ ಪ್ರತಿಪಕ್ಷಗಳ ಬೆಂಬಲ ಗಳಿಸಲು ಮತ್ತೆ ಅವಕಾಶ ಪಡೆದಿರುವ ಕಾಂಗ್ರೆಸ್ನ ನಿನ್ನೆಯ ಪರಿಸ್ಥಿತಿಯಲ್ಲಿ ಈ ಹೊತ್ತಿನವರೆಗೆ ಯಾವುದೇ ಪ್ರಗತಿ ಕಂಡುಬಂದಂತೆ ಇಲ್ಲ. ಹೆಚ್ಚು ಕಡಿಮೆ ಕಾಂಗ್ರೆಸ್ ಪಕ್ಷ ಅಲ್ಪ<br>ಬಹುಮತದ ಸರ್ಕಾರ ರಚನೆಯ ತಂತ್ರಕ್ಕೆ ಜೋತುಬಿದ್ದಿದೆ.</p><p>***</p><p><strong>ಸಮ್ಮಿಶ್ರ ಸರ್ಕಾರ ರಚನೆ ಕಾಂಗ್ರೆಸ್ ಪರಿಶೀಲನೆ</strong></p><p><strong>ನವದೆಹಲಿ, ಏ. 24 (ಪಿಟಿಐ):</strong> ಕೇಂದ್ರದಲ್ಲಿ ಪರ್ಯಾಯ ಸರ್ಕಾರ ರಚನೆ ಕುರಿತಂತೆ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಸಹ ಪರಿಶೀಲನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್<br>ಫರ್ನಾಂಡಿಸ್ ಅವರು ಇಂದು ಇಲ್ಲಿ ತಿಳಿಸಿದರು.</p><p>ಕಾಂಗ್ರೆಸ್ ನೇತೃತ್ವದಲ್ಲಿ ರಚನೆಗೊಳ್ಳುವ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಇಂದು ಮತ್ತೆ ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>