<p><strong>ಮತ್ತೆ ಚುನಾವಣೆ: ಇಂದು ನಿರ್ಧಾರ</strong></p><p><strong>ನವದೆಹಲಿ, ಏ. 25</strong>– ಪರ್ಯಾಯ ಸರ್ಕಾರ ರಚನೆಯ ವಿರೋಧ ಪಕ್ಷಗಳ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಉಸ್ತುವಾರಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಇಂದು ರಾತ್ರಿ ಕರೆದು, ನಾಳೆ ಕೇಂದ್ರ ಸಂಪುಟ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿದ್ದಾರೆ.</p><p>ಕೇಂದ್ರ ಸಂಪುಟ ಸಭೆ 12ನೇ ಲೋಕಸಭೆಯನ್ನು ವಿಸರ್ಜಿಸಿ ಆದಷ್ಟು ಬೇಗ ಮಧ್ಯಂತರ ಚುನಾವಣೆಗೆ ಶಿಫಾರಸು ಮಾಡುವ ನಿರ್ಣಯ ಕೈಗೊಳ್ಳುವ ಸಂಭವ ಇದೆ. ಇದರೊಂದಿಗೆ ಒಂಬತ್ತು ದಿನಗಳ ರಾಜಕೀಯ ಅನಿಶ್ಚಿತತೆಯ ಬಳಿಕ ದೇಶವು ಅನಿವಾರ್ಯವಾಗಿ ಮಧ್ಯಂತರ ಚುನಾವಣೆಗೆ ಸಜ್ಜಾಗುವ ಸ್ಥಿತಿಗೆ ಬಂದಿದೆ.</p><p>ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಸರ್ಕಾರ ರಚನೆ ತಮ್ಮ ಪಕ್ಷದಿಂದ ಸಾಧ್ಯವಿಲ್ಲ ಎಂದು ತಿಳಿಸಿದ ನಂತರ ರಾಷ್ಟ್ರಪತಿಯವರು ವಾಜಪೇಯಿ ಅವರಿಗೆ ಕರೆ ಕಳುಹಿಸಿದ್ದರು.</p><p>***</p><p><strong>ಸಿಪಿಎಂ ‘ಹತಾಶ ಯತ್ನ’ಕ್ಕೆ ಬಿಜೆಪಿ ಖಂಡನೆ</strong></p><p><strong>ನವದೆಹಲಿ, ಏ. 25 (ಪಿಟಿಐ)–</strong> ಕಾಂಗ್ರೆಸ್, ಸಿಪಿಎಂ ಹಾಗೂ ಇತರ ಪಕ್ಷಗಳು ಸರ್ಕಾರ ರಚನೆ ಯತ್ನದಲ್ಲಿ ದೇಶಕ್ಕೆ ವಂಚಿಸಲು ತೊಡಗಿವೆ ಎಂದು ಬಿಜೆಪಿ ಟೀಕಿಸಿದೆ.</p><p>ಕಮ್ಯುನಿಸ್ಟ್ ಪಕ್ಷದ ನೇತೃತ್ವದ ಸರ್ಕಾರ ರಚನೆಗೆ ಯತ್ನಿಸುತ್ತಿರುವ ಹತಾಶ ಪ್ರಯತ್ನವನ್ನು ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಒಪ್ಪಲೇಬಾರದು ಎಂದು ಬಿಜೆಪಿಯ ವಕ್ತಾರ ವೆಂಕಯ್ಯನಾಯ್ಡು ಇಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮತ್ತೆ ಚುನಾವಣೆ: ಇಂದು ನಿರ್ಧಾರ</strong></p><p><strong>ನವದೆಹಲಿ, ಏ. 25</strong>– ಪರ್ಯಾಯ ಸರ್ಕಾರ ರಚನೆಯ ವಿರೋಧ ಪಕ್ಷಗಳ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಉಸ್ತುವಾರಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಇಂದು ರಾತ್ರಿ ಕರೆದು, ನಾಳೆ ಕೇಂದ್ರ ಸಂಪುಟ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿದ್ದಾರೆ.</p><p>ಕೇಂದ್ರ ಸಂಪುಟ ಸಭೆ 12ನೇ ಲೋಕಸಭೆಯನ್ನು ವಿಸರ್ಜಿಸಿ ಆದಷ್ಟು ಬೇಗ ಮಧ್ಯಂತರ ಚುನಾವಣೆಗೆ ಶಿಫಾರಸು ಮಾಡುವ ನಿರ್ಣಯ ಕೈಗೊಳ್ಳುವ ಸಂಭವ ಇದೆ. ಇದರೊಂದಿಗೆ ಒಂಬತ್ತು ದಿನಗಳ ರಾಜಕೀಯ ಅನಿಶ್ಚಿತತೆಯ ಬಳಿಕ ದೇಶವು ಅನಿವಾರ್ಯವಾಗಿ ಮಧ್ಯಂತರ ಚುನಾವಣೆಗೆ ಸಜ್ಜಾಗುವ ಸ್ಥಿತಿಗೆ ಬಂದಿದೆ.</p><p>ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಸರ್ಕಾರ ರಚನೆ ತಮ್ಮ ಪಕ್ಷದಿಂದ ಸಾಧ್ಯವಿಲ್ಲ ಎಂದು ತಿಳಿಸಿದ ನಂತರ ರಾಷ್ಟ್ರಪತಿಯವರು ವಾಜಪೇಯಿ ಅವರಿಗೆ ಕರೆ ಕಳುಹಿಸಿದ್ದರು.</p><p>***</p><p><strong>ಸಿಪಿಎಂ ‘ಹತಾಶ ಯತ್ನ’ಕ್ಕೆ ಬಿಜೆಪಿ ಖಂಡನೆ</strong></p><p><strong>ನವದೆಹಲಿ, ಏ. 25 (ಪಿಟಿಐ)–</strong> ಕಾಂಗ್ರೆಸ್, ಸಿಪಿಎಂ ಹಾಗೂ ಇತರ ಪಕ್ಷಗಳು ಸರ್ಕಾರ ರಚನೆ ಯತ್ನದಲ್ಲಿ ದೇಶಕ್ಕೆ ವಂಚಿಸಲು ತೊಡಗಿವೆ ಎಂದು ಬಿಜೆಪಿ ಟೀಕಿಸಿದೆ.</p><p>ಕಮ್ಯುನಿಸ್ಟ್ ಪಕ್ಷದ ನೇತೃತ್ವದ ಸರ್ಕಾರ ರಚನೆಗೆ ಯತ್ನಿಸುತ್ತಿರುವ ಹತಾಶ ಪ್ರಯತ್ನವನ್ನು ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಒಪ್ಪಲೇಬಾರದು ಎಂದು ಬಿಜೆಪಿಯ ವಕ್ತಾರ ವೆಂಕಯ್ಯನಾಯ್ಡು ಇಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>