<p><strong>ಅತಿಕ್ರಮಣಕಾರರಿಗೆ ತಕ್ಕ ಪಾಠ: 4 ನೆಲೆ ನಾಶ</strong></p><p><strong>ನವದೆಹಲಿ, ಜೂನ್ 30–</strong> ಭಾರತೀಯ ಸೇನೆ ಮತ್ತು ವಾಯುಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಬಟಾಲಿಕ್ ಮತ್ತು ಡ್ರಾಸ್ ವಲಯದಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ ಹಾಗೂ ನಾಲ್ಕು ಪ್ರಮುಖ ನೆಲೆಗಳನ್ನು ಪುನಃ ವಶಕ್ಕೆ ಪಡೆಯಲಾಗಿದೆ.</p><p>ಪಾಕಿಸ್ತಾನದ ಕಡೆ 40 ಮಂದಿ ಸತ್ತಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆಯು ಮೂವರು ಅಧಿಕಾರಿಗಳು ಸೇರಿ 23 ಯೋಧರನ್ನು ಕಳೆದುಕೊಂಡಿದೆ.</p>.<p><strong>ಅಣ್ವಸ್ತ್ರ ಪ್ರಯೋಗ: ಪಾಕ್ ಬೆದರಿಕೆ</strong></p><p><strong>ಇಸ್ಲಾಮಾಬಾದ್, ಜೂನ್ 30 (ಪಿಟಿಐ)–</strong> ಅಣ್ವಸ್ತ್ರ ಬಳಸುವುದಕ್ಕೆ ಸಹ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನ ಇಂದು ಮತ್ತೊಮ್ಮೆ ಬೆದರಿಕೆ ಹಾಕಿದೆ. ಇದೇ ವೇಳೆ, ತಾನು ಕಾಶ್ಮೀರಿ ಭಯೋತ್ಪಾದಕರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರಿಸುವುದಾಗಿ ಅದು ಸ್ಪಷ್ಟಪಡಿಸಿದೆ. ಕಾರ್ಗಿಲ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸೆನೆಟ್ ಸಭೆಯ ಮುಕ್ತಾಯಕ್ಕೆ ಈ ಹೇಳಿಕೆ ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅತಿಕ್ರಮಣಕಾರರಿಗೆ ತಕ್ಕ ಪಾಠ: 4 ನೆಲೆ ನಾಶ</strong></p><p><strong>ನವದೆಹಲಿ, ಜೂನ್ 30–</strong> ಭಾರತೀಯ ಸೇನೆ ಮತ್ತು ವಾಯುಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಬಟಾಲಿಕ್ ಮತ್ತು ಡ್ರಾಸ್ ವಲಯದಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ ಹಾಗೂ ನಾಲ್ಕು ಪ್ರಮುಖ ನೆಲೆಗಳನ್ನು ಪುನಃ ವಶಕ್ಕೆ ಪಡೆಯಲಾಗಿದೆ.</p><p>ಪಾಕಿಸ್ತಾನದ ಕಡೆ 40 ಮಂದಿ ಸತ್ತಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆಯು ಮೂವರು ಅಧಿಕಾರಿಗಳು ಸೇರಿ 23 ಯೋಧರನ್ನು ಕಳೆದುಕೊಂಡಿದೆ.</p>.<p><strong>ಅಣ್ವಸ್ತ್ರ ಪ್ರಯೋಗ: ಪಾಕ್ ಬೆದರಿಕೆ</strong></p><p><strong>ಇಸ್ಲಾಮಾಬಾದ್, ಜೂನ್ 30 (ಪಿಟಿಐ)–</strong> ಅಣ್ವಸ್ತ್ರ ಬಳಸುವುದಕ್ಕೆ ಸಹ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನ ಇಂದು ಮತ್ತೊಮ್ಮೆ ಬೆದರಿಕೆ ಹಾಕಿದೆ. ಇದೇ ವೇಳೆ, ತಾನು ಕಾಶ್ಮೀರಿ ಭಯೋತ್ಪಾದಕರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರಿಸುವುದಾಗಿ ಅದು ಸ್ಪಷ್ಟಪಡಿಸಿದೆ. ಕಾರ್ಗಿಲ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸೆನೆಟ್ ಸಭೆಯ ಮುಕ್ತಾಯಕ್ಕೆ ಈ ಹೇಳಿಕೆ ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>