<p><strong>ಸಂಸತ್ತಿನಲ್ಲಿ ಜೈನ್ ವರದಿಮಂಡನೆ: ಗುಪ್ತಾ ಸ್ಪಷ್ಟನೆ<br />ನವದೆಹಲಿ, ನ. 13 (ಪಿಟಿಐ)</strong>– ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ಮಾಡುತ್ತಿರುವ ನ್ಯಾಯಮೂರ್ತಿ ಮಿಲಾಪ್ ಚಂದ್ ಜೈನ್ ಆಯೋಗದ ಮಧ್ಯಂತರ ವರದಿ ಹಾಗೂ ಅದನ್ನು ಆಧರಿಸಿ ತೆಗೆದುಕೊಂಡ ಕ್ರಮದ ವಿವರವನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದೆಂದು ಗೃಹ ಸಚಿವ ಇಂದ್ರಜಿತ್ ಗುಪ್ತಾ ಇಂದು ತಿಳಿಸಿದರು.</p>.<p>ವರದಿಯನ್ನು ತಡೆಹಿಡಿಯುವ ಅಥವಾ ಯಾರನ್ನೇ ರಕ್ಷಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p><strong>ವಿವಾದ ಇತ್ಯರ್ಥಕ್ಕೆ ಕೇಸರಿ ಜತೆ ಗುಜ್ರಾಲ್ ಚರ್ಚೆ<br />ನವದೆಹಲಿ, ನ. 13–</strong> ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಜೈನ್ ಆಯೋಗದ ಮಧ್ಯಂತರ ವರದಿಯ ಸೋರಿಕೆಯು ಎಬ್ಬಿಸಿರುವ ವಿವಾದಕ್ಕೆ ಪರಿಹಾರ ಕಂಡುಹಿಡಿಯಲು ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ರಾತ್ರಿ ಕಾಂಗ್ರೆಸ್ ಅಧ್ಯಕ್ಷ ಸೀತಾರಾಂ ಕೇಸರಿ ಮತ್ತು ಇತರ ನಾಯಕರೊಡನೆ ಮಾತುಕತೆ ನಡೆಸಿದರು.</p>.<p><strong>‘6 ಸಾವಿರ ಮೆ.ವಾ. ವಿದ್ಯುತ್ ಉತ್ಪಾದನೆಗೆ ಅನುಮತಿ’<br />ತುಮಕೂರು, ನ. 13– </strong>ಆರು ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಮಂಜೂರಾತಿ ದೊರಕಿದ್ದು, ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಮೆಗಾ ವಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದಿಸಲಾಗು ವುದು ಎಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಹೇಳಿದರು.</p>.<p>ಕುಣಿಗಲ್ ತಾಲ್ಲೂಕಿನ ಅಂಚೆಪಾಳ್ಯದಲ್ಲಿ 220 ಕೆ.ವಿ. ಸಾಮರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 5 ಮತ್ತು 6ನೇ ಸ್ಥಾವರದ ನಿರ್ಮಾಣ ಕಾರ್ಯವನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಸತ್ತಿನಲ್ಲಿ ಜೈನ್ ವರದಿಮಂಡನೆ: ಗುಪ್ತಾ ಸ್ಪಷ್ಟನೆ<br />ನವದೆಹಲಿ, ನ. 13 (ಪಿಟಿಐ)</strong>– ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ಮಾಡುತ್ತಿರುವ ನ್ಯಾಯಮೂರ್ತಿ ಮಿಲಾಪ್ ಚಂದ್ ಜೈನ್ ಆಯೋಗದ ಮಧ್ಯಂತರ ವರದಿ ಹಾಗೂ ಅದನ್ನು ಆಧರಿಸಿ ತೆಗೆದುಕೊಂಡ ಕ್ರಮದ ವಿವರವನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದೆಂದು ಗೃಹ ಸಚಿವ ಇಂದ್ರಜಿತ್ ಗುಪ್ತಾ ಇಂದು ತಿಳಿಸಿದರು.</p>.<p>ವರದಿಯನ್ನು ತಡೆಹಿಡಿಯುವ ಅಥವಾ ಯಾರನ್ನೇ ರಕ್ಷಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p><strong>ವಿವಾದ ಇತ್ಯರ್ಥಕ್ಕೆ ಕೇಸರಿ ಜತೆ ಗುಜ್ರಾಲ್ ಚರ್ಚೆ<br />ನವದೆಹಲಿ, ನ. 13–</strong> ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಜೈನ್ ಆಯೋಗದ ಮಧ್ಯಂತರ ವರದಿಯ ಸೋರಿಕೆಯು ಎಬ್ಬಿಸಿರುವ ವಿವಾದಕ್ಕೆ ಪರಿಹಾರ ಕಂಡುಹಿಡಿಯಲು ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ರಾತ್ರಿ ಕಾಂಗ್ರೆಸ್ ಅಧ್ಯಕ್ಷ ಸೀತಾರಾಂ ಕೇಸರಿ ಮತ್ತು ಇತರ ನಾಯಕರೊಡನೆ ಮಾತುಕತೆ ನಡೆಸಿದರು.</p>.<p><strong>‘6 ಸಾವಿರ ಮೆ.ವಾ. ವಿದ್ಯುತ್ ಉತ್ಪಾದನೆಗೆ ಅನುಮತಿ’<br />ತುಮಕೂರು, ನ. 13– </strong>ಆರು ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಮಂಜೂರಾತಿ ದೊರಕಿದ್ದು, ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಮೆಗಾ ವಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದಿಸಲಾಗು ವುದು ಎಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಹೇಳಿದರು.</p>.<p>ಕುಣಿಗಲ್ ತಾಲ್ಲೂಕಿನ ಅಂಚೆಪಾಳ್ಯದಲ್ಲಿ 220 ಕೆ.ವಿ. ಸಾಮರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 5 ಮತ್ತು 6ನೇ ಸ್ಥಾವರದ ನಿರ್ಮಾಣ ಕಾರ್ಯವನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>