<p><strong>ತ್ರಿಪುರಾ ಜನಾಂಗೀಯ ಘರ್ಷಣೆ: 45 ಸಾವು</strong></p><p><strong>ಅಗರ್ತಲ, ಮೇ 21 (ಪಿಟಿಐ):</strong> ನಿಷೇಧಿತ ತ್ರಿಪುರಾ ರಾಷ್ಟ್ರೀಯ ವಿಮೋಚನ ರಂಗ (ಎನ್ಎಲ್ಎಫ್ಟಿ) ಇಂದು ಇನ್ನೂ 7 ಮಂದಿಯನ್ನು ಗುಂಡಿಟ್ಟು ಸಾಯಿಸಿದ್ದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸತ್ತವರ ಸಂಖ್ಯೆ 45ಕ್ಕೆ ಏರಿದೆ.</p><p>ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ರತಿಯಾದಲ್ಲಿ ಎನ್ಎಲ್ಎಫ್ಟಿ ಉಗ್ರಗಾಮಿಗಳು 7 ಮಂದಿಯನ್ನು ಗುಂಡಿಟ್ಟು ಸಾಯಿಸಿದರು. ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿನ್ನೆ 25 ಮಂದಿಯನ್ನು ಉಗ್ರರು ಹತ್ಯೆ ಮಾಡಿದ್ದರು. ಶಾಲೆಯೊಂದರಲ್ಲಿ ರಕ್ಷಣೆ ಪಡೆದಿದ್ದವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಯಿತು.</p><p>***</p>.<p><strong>‘ಪಂಚಾಯಿತಿ ಚುನಾವಣೆ ಗೆಲುವು ಉಸ್ತುವಾರಿ ಸಚಿವರ ಜವಾಬ್ದಾರಿ’</strong></p><p><strong>ಬೆಂಗಳೂರು, ಮೇ 21:</strong> ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡುವುದು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಂದರ್ಥದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದಂತೆ ಮಾತನಾಡಿದರು. ಚುನಾವಣೆಯಲ್ಲಿ ಏನಾದರೂ ಹೆಚ್ಚು–ಕಡಿಮೆಯಾದರೆ ತಾವು ಹೊಣೆಯಲ್ಲ ಎಂದೂ ಹೇಳಿಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಪುರಾ ಜನಾಂಗೀಯ ಘರ್ಷಣೆ: 45 ಸಾವು</strong></p><p><strong>ಅಗರ್ತಲ, ಮೇ 21 (ಪಿಟಿಐ):</strong> ನಿಷೇಧಿತ ತ್ರಿಪುರಾ ರಾಷ್ಟ್ರೀಯ ವಿಮೋಚನ ರಂಗ (ಎನ್ಎಲ್ಎಫ್ಟಿ) ಇಂದು ಇನ್ನೂ 7 ಮಂದಿಯನ್ನು ಗುಂಡಿಟ್ಟು ಸಾಯಿಸಿದ್ದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸತ್ತವರ ಸಂಖ್ಯೆ 45ಕ್ಕೆ ಏರಿದೆ.</p><p>ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ರತಿಯಾದಲ್ಲಿ ಎನ್ಎಲ್ಎಫ್ಟಿ ಉಗ್ರಗಾಮಿಗಳು 7 ಮಂದಿಯನ್ನು ಗುಂಡಿಟ್ಟು ಸಾಯಿಸಿದರು. ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿನ್ನೆ 25 ಮಂದಿಯನ್ನು ಉಗ್ರರು ಹತ್ಯೆ ಮಾಡಿದ್ದರು. ಶಾಲೆಯೊಂದರಲ್ಲಿ ರಕ್ಷಣೆ ಪಡೆದಿದ್ದವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಯಿತು.</p><p>***</p>.<p><strong>‘ಪಂಚಾಯಿತಿ ಚುನಾವಣೆ ಗೆಲುವು ಉಸ್ತುವಾರಿ ಸಚಿವರ ಜವಾಬ್ದಾರಿ’</strong></p><p><strong>ಬೆಂಗಳೂರು, ಮೇ 21:</strong> ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡುವುದು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಂದರ್ಥದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದಂತೆ ಮಾತನಾಡಿದರು. ಚುನಾವಣೆಯಲ್ಲಿ ಏನಾದರೂ ಹೆಚ್ಚು–ಕಡಿಮೆಯಾದರೆ ತಾವು ಹೊಣೆಯಲ್ಲ ಎಂದೂ ಹೇಳಿಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>