<p><strong>ತೈಲಾಗಾರ ವಿರುದ್ಧ ಚಳವಳಿ: ಉದ್ರಿಕ್ತ ಗುಂಪಿನ ಮೇಲೆ ಗುಂಡು</strong><br /><strong>ಮಂಗಳೂರು, ಡಿ. 21–</strong> ಮಂಗಳೂರು ತೈಲಾಗಾರ (ಎಂಆರ್ಪಿಎಲ್) ತ್ಯಾಜ್ಯ ವಸ್ತುಗಳನ್ನು ಸಮುದ್ರಕ್ಕೆ ಬಿಡಲು ಹಾಕುತ್ತಿರುವ ಪೈಪ್ಲೈನ್ ಅನ್ನು ಕೀಳಬೇಕು ಎಂದು ಒತ್ತಾಯಿಸಿ ರಸ್ತೆತಡೆ ಚಳವಳಿ ನಡೆಸುತ್ತಿದ್ದ ಮೀನುಗಾರರು ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆಯಂತಹ ಹಿಂಸಾಕೃತ್ಯಕ್ಕೆ ಇಳಿದಿದ್ದರಿಂದ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ 9 ಜನರು ಗಾಯಗೊಂಡಿದ್ದಾರೆ.</p>.<p>ಗೋಲಿಬಾರ್ ಪ್ರತಿಭಟಿಸಿ ನಾಳೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ.</p>.<p><strong>ಪಾಲಿಕೆ, ಪುರಸಭೆ ಮೀಸಲಾತಿ ನಿಗದಿ</strong><br /><strong>ಬೆಂಗಳೂರು, ಡಿ. 21–</strong> ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ಮೊದಲ ವರ್ಷದ ಅವಧಿಗೆ ಅನ್ವಯವಾಗುವಂತೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ಆರು ಮಹಾನಗರಪಾಲಿಕೆಗಳಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ಎರಡು, ‘ಬಿ’ ಗುಂಪಿಗೆ ಒಂದು, ಪರಿಶಿಷ್ಟ ಜಾತಿಯವರಿಗೆ ಒಂದು ಹಾಗೂ ಸಾಮಾನ್ಯ ವರ್ಗಕ್ಕೆ ಎರಡು ಮೇಯರ್ ಸ್ಥಾನಗಳು ಮೀಸಲಾಗಿವೆ. ಇದರಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ನೀಡಿರುವ ಒಂದು ಸ್ಥಾನ ಮಹಿಳೆಗೆ ಮೀಸಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೈಲಾಗಾರ ವಿರುದ್ಧ ಚಳವಳಿ: ಉದ್ರಿಕ್ತ ಗುಂಪಿನ ಮೇಲೆ ಗುಂಡು</strong><br /><strong>ಮಂಗಳೂರು, ಡಿ. 21–</strong> ಮಂಗಳೂರು ತೈಲಾಗಾರ (ಎಂಆರ್ಪಿಎಲ್) ತ್ಯಾಜ್ಯ ವಸ್ತುಗಳನ್ನು ಸಮುದ್ರಕ್ಕೆ ಬಿಡಲು ಹಾಕುತ್ತಿರುವ ಪೈಪ್ಲೈನ್ ಅನ್ನು ಕೀಳಬೇಕು ಎಂದು ಒತ್ತಾಯಿಸಿ ರಸ್ತೆತಡೆ ಚಳವಳಿ ನಡೆಸುತ್ತಿದ್ದ ಮೀನುಗಾರರು ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆಯಂತಹ ಹಿಂಸಾಕೃತ್ಯಕ್ಕೆ ಇಳಿದಿದ್ದರಿಂದ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ 9 ಜನರು ಗಾಯಗೊಂಡಿದ್ದಾರೆ.</p>.<p>ಗೋಲಿಬಾರ್ ಪ್ರತಿಭಟಿಸಿ ನಾಳೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ.</p>.<p><strong>ಪಾಲಿಕೆ, ಪುರಸಭೆ ಮೀಸಲಾತಿ ನಿಗದಿ</strong><br /><strong>ಬೆಂಗಳೂರು, ಡಿ. 21–</strong> ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ಮೊದಲ ವರ್ಷದ ಅವಧಿಗೆ ಅನ್ವಯವಾಗುವಂತೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ಆರು ಮಹಾನಗರಪಾಲಿಕೆಗಳಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ಎರಡು, ‘ಬಿ’ ಗುಂಪಿಗೆ ಒಂದು, ಪರಿಶಿಷ್ಟ ಜಾತಿಯವರಿಗೆ ಒಂದು ಹಾಗೂ ಸಾಮಾನ್ಯ ವರ್ಗಕ್ಕೆ ಎರಡು ಮೇಯರ್ ಸ್ಥಾನಗಳು ಮೀಸಲಾಗಿವೆ. ಇದರಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ನೀಡಿರುವ ಒಂದು ಸ್ಥಾನ ಮಹಿಳೆಗೆ ಮೀಸಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>