<p><strong>ದರೋಡೆಗೆ ಯತ್ನ– ಡಕಾಯಿತರ ಮೇಲೆ ಗುಂಡು</strong></p>.<p>ರಾಯಚೂರು, ಫೆ. 2– ನಗರದ ವಿಜಯನಗರ ಬಡಾವಣೆಯಲ್ಲಿ ಮನೆಯೊಂದರ ಬಾಗಿಲು ಒಡೆದು ದರೋಡೆಗೆ ಯತ್ನಿಸುತ್ತಿದ್ದ ಡಕಾಯಿತರ ತಂಡದ ಮೇಲೆ ಅಲ್ಲಿನ ನಿವಾಸಿಯೊಬ್ಬರು ಗುಂಡು ಹಾರಿಸಿದ್ದರಿಂದ ದುಷ್ಕರ್ಮಿಗಳು ಪರಾರಿಯಾದ ಘಟನೆ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.</p>.<p><strong>ದಳ ಮೂರನೇ ಅಭ್ಯರ್ಥಿ ಯಾರು?</strong></p>.<p>ಬೆಂಗಳೂರು, ಫೆ. 2– ರಾಜ್ಯಸಭಾ ಚುನಾವಣೆಗೆ ಜನತಾದಳದಿಂದ ಮೂರನೇ ಅಭ್ಯರ್ಥಿ ಯಾರಾಗಬಹುದು ಎಂಬುದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.</p>.<p>ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮತ್ತು ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ಸಂಸದೀಯ ಮಂಡಲಿ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ, ಮೂರನೇ ಅಭ್ಯರ್ಥಿ ಹಿಂದುಳಿದ ವರ್ಗಕ್ಕೆ ಸೇರಿದವರು ಆಗಿರಬೇಕು ಎಂಬುದರ ಬಗ್ಗೆ ಮಾತುಕತೆ ನಡೆದಿದೆ.</p>.<p>ಆದರೆ ಹಿಂದುಳಿದ ವರ್ಗದವರಲ್ಲಿ ಯಾರಿಗೆ ಆದ್ಯತೆ ನೀಡಬೇಕು? ಈ ಜಿಜ್ಞಾಸೆಯಿಂದಾಗಿ ಯಾರು ಅಭ್ಯರ್ಥಿ ಎಂಬುದು ಸ್ಪಷ್ಟವಾಗಿಲ್ಲ. ಪಕ್ಷದ ಹಿರಿಯ ಮುಖಂಡರೊಬ್ಬರ ಪ್ರಕಾರ, ಇನ್ನು ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದರೋಡೆಗೆ ಯತ್ನ– ಡಕಾಯಿತರ ಮೇಲೆ ಗುಂಡು</strong></p>.<p>ರಾಯಚೂರು, ಫೆ. 2– ನಗರದ ವಿಜಯನಗರ ಬಡಾವಣೆಯಲ್ಲಿ ಮನೆಯೊಂದರ ಬಾಗಿಲು ಒಡೆದು ದರೋಡೆಗೆ ಯತ್ನಿಸುತ್ತಿದ್ದ ಡಕಾಯಿತರ ತಂಡದ ಮೇಲೆ ಅಲ್ಲಿನ ನಿವಾಸಿಯೊಬ್ಬರು ಗುಂಡು ಹಾರಿಸಿದ್ದರಿಂದ ದುಷ್ಕರ್ಮಿಗಳು ಪರಾರಿಯಾದ ಘಟನೆ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.</p>.<p><strong>ದಳ ಮೂರನೇ ಅಭ್ಯರ್ಥಿ ಯಾರು?</strong></p>.<p>ಬೆಂಗಳೂರು, ಫೆ. 2– ರಾಜ್ಯಸಭಾ ಚುನಾವಣೆಗೆ ಜನತಾದಳದಿಂದ ಮೂರನೇ ಅಭ್ಯರ್ಥಿ ಯಾರಾಗಬಹುದು ಎಂಬುದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.</p>.<p>ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮತ್ತು ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ಸಂಸದೀಯ ಮಂಡಲಿ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ, ಮೂರನೇ ಅಭ್ಯರ್ಥಿ ಹಿಂದುಳಿದ ವರ್ಗಕ್ಕೆ ಸೇರಿದವರು ಆಗಿರಬೇಕು ಎಂಬುದರ ಬಗ್ಗೆ ಮಾತುಕತೆ ನಡೆದಿದೆ.</p>.<p>ಆದರೆ ಹಿಂದುಳಿದ ವರ್ಗದವರಲ್ಲಿ ಯಾರಿಗೆ ಆದ್ಯತೆ ನೀಡಬೇಕು? ಈ ಜಿಜ್ಞಾಸೆಯಿಂದಾಗಿ ಯಾರು ಅಭ್ಯರ್ಥಿ ಎಂಬುದು ಸ್ಪಷ್ಟವಾಗಿಲ್ಲ. ಪಕ್ಷದ ಹಿರಿಯ ಮುಖಂಡರೊಬ್ಬರ ಪ್ರಕಾರ, ಇನ್ನು ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>