ಚಿತ್ರ ವಿತರಕರ ಸಮಸ್ಯೆ ಪರಿಹಾರಕ್ಕೆ ಸಮಿತಿ: ಭರವಸೆ
ಬೆಂಗಳೂರು, ಫೆ. 18– ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಇನ್ನಷ್ಟು ಸೂಕ್ತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಇತ್ತೀಚೆಗೆ ತೆಗೆದುಕೊಂಡ ತೀರ್ಮಾನದಿಂದ ಪ್ರದರ್ಶಕ ಮತ್ತು ವಿತರಕ ವಲಯಕ್ಕೆ ಯಾವುದೇ ರೀತಿಯ ತೊಂದರೆ ಎದುರಾದಲ್ಲಿ ಅದಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದ ಸಮಿತಿಯೊಂದನ್ನು ರಚಿಸಲಾಗುವುದು ಎಂದು ವಾರ್ತಾ ಇಲಾಖೆಯ ಕಾರ್ಯದರ್ಶಿ ಎನ್.ವಿಶ್ವನಾಥನ್ ಭರವಸೆ ಕೊಟ್ಟಿದ್ದಾರೆ.