ಬೆಂಗಳೂರು, ಮಾರ್ಚ್ 30– ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಂ.ರಘುಪತಿ ಹಾಗೂ ಚಿತ್ರದುರ್ಗದಿಂದ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಪಿ.ಕೋದಂಡರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದು ಜನತಾದಳದ ದೆಹಲಿ ವರಿಷ್ಠರು ಸೂಚನೆ ನೀಡಿದ್ದು, ಇದು ರಾಜ್ಯದ ದಳದ ಹಿರಿಯ ಮುಖಂಡರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.