ಮಂಗಳೂರು, ಏ. 16– ಹೊಸ ಆರ್ಥಿಕ ನೀತಿಯಿಂದ ಕಳೆದ ಐದು ವರ್ಷಗಳಲ್ಲಿ ದೇಶ ಉತ್ತಮ ಪ್ರಗತಿ ಸಾಧಿಸುತ್ತಿದ್ದು,ಈ ಪ್ರಕ್ರಿಯೆ ಇದೇ ರೀತಿ ಮುಂದುವರಿದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರತ
ವಿಶ್ವಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗುವುದರಲ್ಲಿ ಸಂದೇಹವಿಲ್ಲ ಎಂದು ಕಾಂಗೈ ಅಧ್ಯಕ್ಷರೂ ಆದ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಇಂದು ಇಲ್ಲಿ ಹೇಳಿದರು.