ನವದೆಹಲಿ, ಏ.17 (ಪಿಟಿಐ, ಯುಎನ್ಐ)– ವಸತಿ ಹಗರಣದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲೆ ಶೀಲಾ ಕೌಲ್ ಅವರು ಭಾಗಿಯಾಗಿದ್ದಾರೆ ಎಂದು ಸಿಬಿಐ ಮಾಡಿರುವ ಆರೋಪದಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಕೌಲ್ ರಾಜೀನಾಮೆಗೆ ಸುಪ್ರೀಂ ಕೋರ್ಟ್ ಪರೋಕ್ಷವಾಗಿ ಸೂಚಿಸಿರುವ
ಹಿನ್ನೆಲೆಯಲ್ಲಿ ಯಾವ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರಪತಿ ಡಾ. ಶಂಕರದಯಾಳ್ ಶರ್ಮಾ ಅವರು ಪ್ರಧಾನಿ ಪಿ.ವಿ. ನರಸಿಂಹರಾವ್ ಅವರನ್ನು ಕೇಳಿದ್ದಾರೆ.