ರಾಯಚೂರು, ಏ. 24– ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಿಕ್ಕೆ ಬಂದರೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು (ಶೇ 33ರಷ್ಟು) ಮೀಸಲಾತಿ ನೀಡಲಾಗುವುದು ಎಂದು ಕಾಂಗೈ ಅಧ್ಯಕ್ಷ ಹಾಗೂ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ಇಂದು ಇಲ್ಲಿ ಪ್ರಕಟಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಚುನಾವಣಾ ಭಾಷಣ ಮಾಡಿದ ರಾವ್, ‘ಈ ಮೀಸಲಾತಿಯಿಂದ ಮಹಿಳೆಯರು ಸಾಕಷ್ಟು ಕಡೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
‘ಈಗಿನ ಚುನಾವಣೆ ದೇಶದ ಭವಿಷ್ಯತ್ತಿನ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ನಾವಿಂದು ವಿಚಿತ್ರವಾದ ಪರಿಸ್ಥಿತಿಯಲ್ಲಿದ್ದೇವೆ. ಜನ ಮತ ಚಲಾಯಿಸುವಾಗ ಸಾಕಷ್ಟು ಯೋಜನೆ ಮಾಡಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು’ ಎಂದು ರಾವ್ ವಿನಂತಿಸಿದರು.