<p><strong>ಹಳ್ಳಿಗಳಿಗೆ ಸೌಕರ್ಯ, ನ್ಯಾಯ– ನೂತನ ಪ್ರಧಾನಿ ಸಂಕಲ್ಪ</strong></p>.<p><strong>ಬೆಂಗಳೂರು, ಜೂನ್ 3–</strong> ‘ನಲವತ್ತೊಂಬತ್ತು ವರ್ಷಗಳಲ್ಲಿ ನ್ಯಾಯ ಸಿಗದವರಿಗೆ ನ್ಯಾಯ ದೊರಕಿಸಿಕೊಡು ವುದು ನನ್ನ ಮೂಲ ಗುರಿ. ನಾನು ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂಬುದು ಮುಖ್ಯವಲ್ಲ. ಆದರೆ ಅಧಿಕಾರ ಬಿಟ್ಟು ಬರುವಾಗ ಈ ಸಾಮಾನ್ಯ ರೈತನ ಮಗ ಜನಸಾಮಾನ್ಯರಿಗೆ ಏನಾದರೂ ಒಳ್ಳೆಯದು ಮಾಡಿದ ಎನ್ನುವ ಭಾವನೆ ಮೂಡಿದರೆ ಸಾಕು’.</p>.<p>‘ಕುಡಿಯುವ ನೀರು, ತಲೆಯ ಮೇಲೊಂದು ಸೂರು, ಓಡಾಟಕ್ಕೆ ಒಳ್ಳೆಯ ರಸ್ತೆ, ಮಕ್ಕಳಿಗೆ ಶಾಲೆ– ಶಿಕ್ಷಕರಿಲ್ಲದೆ ನರಳುತ್ತಿರುವ ಹಳ್ಳಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದಕ್ಕೆ ನನ್ನ ಆದ್ಯತೆ. ಇದನ್ನು ವಿರೋಧಿಸುವವರು ಯಾರು?’</p>.<p>ದೇಶದ 12ನೇ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ ಅವರು ಕೇಳುವ ಪ್ರಶ್ನೆ ಇದು. ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಿಯವರು ಭಾನುವಾರ ರಾತ್ರಿ ‘ಪ್ರಜಾವಾಣಿ’ ಜತೆ ಮಾತನಾಡಿದರು.</p>.<p><strong>ಸಚಿವರ ಪಟ್ಟಿ ಸಹಿತ ಪಟೇಲ್ ದೆಹಲಿಗೆ</strong></p>.<p><strong>ಬೆಂಗಳೂರು, ಜೂನ್ 3–</strong> ಮಂತ್ರಿಮಂಡಲ ರಚನೆ ಬಗ್ಗೆ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜತೆಗೆ ಚರ್ಚಿಸಿ, ಸಚಿವರಾಗುವವರ ಪಟ್ಟಿಗೆ ಒಪ್ಪಿಗೆ ಪಡೆದುಬರಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಮತ್ತು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳ್ಳಿಗಳಿಗೆ ಸೌಕರ್ಯ, ನ್ಯಾಯ– ನೂತನ ಪ್ರಧಾನಿ ಸಂಕಲ್ಪ</strong></p>.<p><strong>ಬೆಂಗಳೂರು, ಜೂನ್ 3–</strong> ‘ನಲವತ್ತೊಂಬತ್ತು ವರ್ಷಗಳಲ್ಲಿ ನ್ಯಾಯ ಸಿಗದವರಿಗೆ ನ್ಯಾಯ ದೊರಕಿಸಿಕೊಡು ವುದು ನನ್ನ ಮೂಲ ಗುರಿ. ನಾನು ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂಬುದು ಮುಖ್ಯವಲ್ಲ. ಆದರೆ ಅಧಿಕಾರ ಬಿಟ್ಟು ಬರುವಾಗ ಈ ಸಾಮಾನ್ಯ ರೈತನ ಮಗ ಜನಸಾಮಾನ್ಯರಿಗೆ ಏನಾದರೂ ಒಳ್ಳೆಯದು ಮಾಡಿದ ಎನ್ನುವ ಭಾವನೆ ಮೂಡಿದರೆ ಸಾಕು’.</p>.<p>‘ಕುಡಿಯುವ ನೀರು, ತಲೆಯ ಮೇಲೊಂದು ಸೂರು, ಓಡಾಟಕ್ಕೆ ಒಳ್ಳೆಯ ರಸ್ತೆ, ಮಕ್ಕಳಿಗೆ ಶಾಲೆ– ಶಿಕ್ಷಕರಿಲ್ಲದೆ ನರಳುತ್ತಿರುವ ಹಳ್ಳಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದಕ್ಕೆ ನನ್ನ ಆದ್ಯತೆ. ಇದನ್ನು ವಿರೋಧಿಸುವವರು ಯಾರು?’</p>.<p>ದೇಶದ 12ನೇ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ ಅವರು ಕೇಳುವ ಪ್ರಶ್ನೆ ಇದು. ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಿಯವರು ಭಾನುವಾರ ರಾತ್ರಿ ‘ಪ್ರಜಾವಾಣಿ’ ಜತೆ ಮಾತನಾಡಿದರು.</p>.<p><strong>ಸಚಿವರ ಪಟ್ಟಿ ಸಹಿತ ಪಟೇಲ್ ದೆಹಲಿಗೆ</strong></p>.<p><strong>ಬೆಂಗಳೂರು, ಜೂನ್ 3–</strong> ಮಂತ್ರಿಮಂಡಲ ರಚನೆ ಬಗ್ಗೆ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜತೆಗೆ ಚರ್ಚಿಸಿ, ಸಚಿವರಾಗುವವರ ಪಟ್ಟಿಗೆ ಒಪ್ಪಿಗೆ ಪಡೆದುಬರಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಮತ್ತು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>