<p><strong>ದಳದಿಂದ ಹೆಗಡೆ ಉಚ್ಚಾಟನೆ</strong></p>.<p><strong>ನವದೆಹಲಿ, ಜೂನ್ 13 (ಪಿಟಿಐ, ಯುಎನ್ಐ)</strong>– ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳದ ಹಿರಿಯ ನಾಯಕ ರಾಮಕೃಷ್ಣ ಹೆಗಡೆ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.</p>.<p>ಹೆಗಡೆ ಅವರ ಉಚ್ಚಾಟನೆಯನ್ನು ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರು ಇಂದು ಇಲ್ಲಿ ಪ್ರಕಟಿಸಿದರು. ‘ಕಳೆದ 5 ವರ್ಷಗಳಿಂದ ಹೆಗಡೆ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಪ್ರಧಾನಿ ಸ್ಥಾನಕ್ಕೆ ಎಚ್.ಡಿ. ದೇವೇಗೌಡ ಅವರನ್ನು ಆಯ್ಕೆ ಮಾಡಿದ ನಂತರ ಹೆಗಡೆ ಅವರು ಪಕ್ಷವನ್ನು ದುರ್ಬಲಗೊಳಿಸುವ ಯತ್ನವನ್ನು ಇನ್ನಷ್ಟು ಹೆಚ್ಚಿಸಿದರು ಎಂದು ಲಾಲೂ ಆರೋಪಿಸಿದ್ದಾರೆ.</p>.<p>ಹೆಗಡೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಕರ್ನಾಟಕ ಜನತಾದಳ ಘಟಕದ ಅಧ್ಯಕ್ಷಮತ್ತು ನಾಗರಿಕ ವಿಮಾನಯಾನ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೂನ್ 10ರಂದು ನೀಡಿದ ದೂರಿನ ಅನ್ವಯ ಹೆಗಡೆ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಯಿತು.</p>.<p><strong>ಉದ್ಯಮಗಳಲ್ಲಿ ‘ಮಾಲಿನ್ಯ ತಡೆ ಇನ್ಸ್ಪೆಕ್ಟರ್’ಗಳ ನೇಮಕಕ್ಕೆ ಶಾಸನ</strong></p>.<p>ಬೆಂಗಳೂರು, ಜೂನ್ 13– ರಾಜ್ಯದ ಬೃಹತ್ ಕೈಗಾರಿಕೆಗಳು ಸೃಷ್ಟಿಸುತ್ತಿರುವ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರ್ವ ಸಿದ್ಧತೆ ನಡೆಸಿದೆ.</p>.<p>ಪರಿಸರ ಮಾಲಿನ್ಯ ಸೃಷ್ಟಿಸುತ್ತಿರುವ ರಾಜ್ಯದ ಬೃಹತ್ ಉದ್ಯಮಗಳಲ್ಲಿ, ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದ ಉದ್ಯಮ ದೊಳಗೇ ‘ಪರಿಸರ ಮಾಲಿನ್ಯ ತಡೆ ಇನ್ ಸ್ಪೆಕ್ಟರ್’ಗಳನ್ನು ನೇಮಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಳದಿಂದ ಹೆಗಡೆ ಉಚ್ಚಾಟನೆ</strong></p>.<p><strong>ನವದೆಹಲಿ, ಜೂನ್ 13 (ಪಿಟಿಐ, ಯುಎನ್ಐ)</strong>– ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳದ ಹಿರಿಯ ನಾಯಕ ರಾಮಕೃಷ್ಣ ಹೆಗಡೆ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.</p>.<p>ಹೆಗಡೆ ಅವರ ಉಚ್ಚಾಟನೆಯನ್ನು ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರು ಇಂದು ಇಲ್ಲಿ ಪ್ರಕಟಿಸಿದರು. ‘ಕಳೆದ 5 ವರ್ಷಗಳಿಂದ ಹೆಗಡೆ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಪ್ರಧಾನಿ ಸ್ಥಾನಕ್ಕೆ ಎಚ್.ಡಿ. ದೇವೇಗೌಡ ಅವರನ್ನು ಆಯ್ಕೆ ಮಾಡಿದ ನಂತರ ಹೆಗಡೆ ಅವರು ಪಕ್ಷವನ್ನು ದುರ್ಬಲಗೊಳಿಸುವ ಯತ್ನವನ್ನು ಇನ್ನಷ್ಟು ಹೆಚ್ಚಿಸಿದರು ಎಂದು ಲಾಲೂ ಆರೋಪಿಸಿದ್ದಾರೆ.</p>.<p>ಹೆಗಡೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಕರ್ನಾಟಕ ಜನತಾದಳ ಘಟಕದ ಅಧ್ಯಕ್ಷಮತ್ತು ನಾಗರಿಕ ವಿಮಾನಯಾನ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೂನ್ 10ರಂದು ನೀಡಿದ ದೂರಿನ ಅನ್ವಯ ಹೆಗಡೆ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಯಿತು.</p>.<p><strong>ಉದ್ಯಮಗಳಲ್ಲಿ ‘ಮಾಲಿನ್ಯ ತಡೆ ಇನ್ಸ್ಪೆಕ್ಟರ್’ಗಳ ನೇಮಕಕ್ಕೆ ಶಾಸನ</strong></p>.<p>ಬೆಂಗಳೂರು, ಜೂನ್ 13– ರಾಜ್ಯದ ಬೃಹತ್ ಕೈಗಾರಿಕೆಗಳು ಸೃಷ್ಟಿಸುತ್ತಿರುವ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರ್ವ ಸಿದ್ಧತೆ ನಡೆಸಿದೆ.</p>.<p>ಪರಿಸರ ಮಾಲಿನ್ಯ ಸೃಷ್ಟಿಸುತ್ತಿರುವ ರಾಜ್ಯದ ಬೃಹತ್ ಉದ್ಯಮಗಳಲ್ಲಿ, ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದ ಉದ್ಯಮ ದೊಳಗೇ ‘ಪರಿಸರ ಮಾಲಿನ್ಯ ತಡೆ ಇನ್ ಸ್ಪೆಕ್ಟರ್’ಗಳನ್ನು ನೇಮಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>