ಬೆಂಗಳೂರು, ಜೂನ್ 15– ‘ಕಳೆದ 5 ವರ್ಷ ದಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪ’ದ ಮೇಲೆ ಜನತಾ ದಳದಿಂದ ಉಚ್ಚಾಟನೆಗೊಂಡಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ‘ಈ 5 ವರ್ಷದ ಹಿಂದೆ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಎಲ್ಲಿ ಇದ್ದರು ಮತ್ತು ಎಲ್ಲಿ
ಕುಳಿತು ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸುತ್ತಿದ್ದರು’ ಎಂದು ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಗಿ ಕೇಳಿದರು.