<p><strong>ಕಾವೇರಿ 3 ತಿಂಗಳಲ್ಲಿ ಇತ್ಯರ್ಥ– ದೇವೇಗೌಡ</strong></p>.<p><strong>ಬೆಂಗಳೂರು, ಜುಲೈ 29– </strong>ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ಕಾವೇರಿ ಜಲ ವಿವಾದವನ್ನು ಇನ್ನು ಮೂರು ತಿಂಗಳಲ್ಲಿ ಬಗೆಹರಿಸುವ ಭರವಸೆಯನ್ನು ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರಿಗೆ ಇಂದು ಇಲ್ಲಿ ನೀಡಿದರು.</p>.<p>ರಾಜಭವನದಲ್ಲಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ ಹಾಗೂ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರೊಂದಿಗೆ, ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿ ದರು ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p>‘ಕಾವೇರಿ ಜಲ ವಿವಾದ ಬೀದಿಗಿಳಿದು ಬಗೆಹರಿಸುವ ವಿಚಾರ ಅಲ್ಲ. ಎರಡೂ ರಾಜ್ಯಗಳಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ಇತ್ಯರ್ಥ ಪಡಿಸಬೇಕಾಗಿದೆ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಮೇಕೆದಾಟು ವಿದ್ಯುತ್ ಯೋಜನೆಯೂ ಪ್ರಸ್ತಾಪಕ್ಕೆ ಬಂದಿತು ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾವೇರಿ 3 ತಿಂಗಳಲ್ಲಿ ಇತ್ಯರ್ಥ– ದೇವೇಗೌಡ</strong></p>.<p><strong>ಬೆಂಗಳೂರು, ಜುಲೈ 29– </strong>ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ಕಾವೇರಿ ಜಲ ವಿವಾದವನ್ನು ಇನ್ನು ಮೂರು ತಿಂಗಳಲ್ಲಿ ಬಗೆಹರಿಸುವ ಭರವಸೆಯನ್ನು ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರಿಗೆ ಇಂದು ಇಲ್ಲಿ ನೀಡಿದರು.</p>.<p>ರಾಜಭವನದಲ್ಲಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ ಹಾಗೂ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರೊಂದಿಗೆ, ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿ ದರು ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p>‘ಕಾವೇರಿ ಜಲ ವಿವಾದ ಬೀದಿಗಿಳಿದು ಬಗೆಹರಿಸುವ ವಿಚಾರ ಅಲ್ಲ. ಎರಡೂ ರಾಜ್ಯಗಳಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ಇತ್ಯರ್ಥ ಪಡಿಸಬೇಕಾಗಿದೆ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಮೇಕೆದಾಟು ವಿದ್ಯುತ್ ಯೋಜನೆಯೂ ಪ್ರಸ್ತಾಪಕ್ಕೆ ಬಂದಿತು ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>