ಮುಖ್ಯಮಂತ್ರಿಗಳಾದ ಜ್ಯೋತಿಬಸು, ಲಾಲೂ ಪ್ರಸಾದ್ ಯಾದವ್, ಎಂ. ಕರುಣಾ ನಿಧಿ ಮತ್ತು ಪ್ರಫುಲ್ಲ ಕುಮಾರ್ ಮಹಂತ ಅವರು ನಾಳೆ ಸಭೆ ಸೇರಿ, ಆಂಧ್ರದ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ದು ಮತ್ತು ಕರ್ನಾಟಕದ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಅಭಿಪ್ರಾಯ ಕೇಳಿ ನಾಳೆ ಸಂಜೆಯೊಳಗೇ ತಮ್ಮ ವರದಿಯನ್ನು ಸ್ಥಾಯಿ ಸಮಿತಿಗೆ ಒಪ್ಪಿಸಲಿದ್ದಾರೆ ಎಂದು ದಳದ ವಕ್ತಾರ ಎಸ್. ಜೈಪಾಲ್ ರೆಡ್ಡಿ ತಿಳಿಸಿದರು.