ಪ್ರಧಾನಿ ನಿವಾಸದಲ್ಲಿ ಬೆಳಿಗ್ಗೆ ಸಭೆ ಸೇರಿದ ಜ್ಯೋತಿ ಬಸು, ಎಂ. ಕರುಣಾನಿಧಿ, ಲಾಲೂ ಪ್ರಸಾದ್ ಯಾದವ್ ಮತ್ತು ಪ್ರಫುಲ್ಲ ಕುಮಾರ್ ಮಹಂತ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರುಗಳ ಜತೆ ಚರ್ಚಿಸಿದರು. ಎರಡೂ ರಾಜ್ಯದವರು ತಮ್ಮ ವಾದಕ್ಕೆ ಅಂಟಿಕೊಂಡಿದ್ದ
ರಿಂದ ಸತ್ಯಶೋಧನಾ ಸಮಿತಿ ರಚಿಸಲು ನಿರ್ಧರಿಸಲಾಯಿತು.