<p><strong>ತಜ್ಞ ಸಮಿತಿ ಹಠಾತ್ ರದ್ದು</strong></p>.<p>ನವದೆಹಲಿ, ಆ. 13– ಕೃಷ್ಣಾ ಯೋಜನೆಯಲ್ಲಿ ಬಚಾವತ್ ತೀರ್ಪಿನ ಉಲ್ಲಂಘನೆ ಮಾಡಲಾ ಗಿದೆ ಎಂದಿರುವ ಆಂಧ್ರಪ್ರದೇಶ ಮತ್ತು ಕರ್ನಾಟಕದ ಪರಸ್ಪರ ಆರೋಪಗಳ ಬಗೆಗೆ ಖುದ್ದು ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯೊಂದನ್ನು ರಚಿಸಲು ಕೈಗೊಂಡಿದ್ದ ತೀರ್ಮಾನವನ್ನು ಕೇಂದ್ರ ಸರ್ಕಾರ ಇಂದು ಕೈಬಿಟ್ಟಿತು.</p>.<p>ಆಂಧ್ರಪ್ರದೇಶದ ಹೈಕೋರ್ಟ್ ಮುಂದೆ ಈಗ ಆಲಮಟ್ಟಿ ಅಣೆಕಟ್ಟು ಎತ್ತರದ ಔಚಿತ್ಯವನ್ನು ಪ್ರಶ್ನಿಸಿರುವ ಅರ್ಜಿಯೊಂದು ವಿಚಾರಣೆಯಲ್ಲಿ ಇರುವುದರಿಂದ ಸಬ್ ಜುಡೀಸ್ ಆಗುವುದೆಂಬ ಕಾರಣವನ್ನು ಸರ್ಕಾರ ನೀಡಿದೆ.</p>.<p><strong>ಆಲಮಟ್ಟಿ: ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ</strong></p>.<p>ಬೆಂಗಳೂರು, ಆ. 13– ಆಲಮಟ್ಟಿ ಅಣೆಕಟ್ಟೆ ವಿಚಾರದಲ್ಲಿ ಸರ್ಕಾರ ತಪ್ಪುಹಾದಿ ತುಳಿಯುತ್ತಿದೆ ಎಂದು ಧರಣಿ ಹೂಡಿರುವ ಪ್ರತಿಪಕ್ಷಗಳ ಸದಸ್ಯರು, ಗದ್ದಲದ ನಡುವೆಯೇ ಇಂದು ವಿಧಾನಸಭೆಯಲ್ಲಿ ಜೆ.ಎಚ್.ಪಟೇಲ್ ನೇತೃತ್ವದ ಸಚಿವ ಸಂಪುಟದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಜ್ಞ ಸಮಿತಿ ಹಠಾತ್ ರದ್ದು</strong></p>.<p>ನವದೆಹಲಿ, ಆ. 13– ಕೃಷ್ಣಾ ಯೋಜನೆಯಲ್ಲಿ ಬಚಾವತ್ ತೀರ್ಪಿನ ಉಲ್ಲಂಘನೆ ಮಾಡಲಾ ಗಿದೆ ಎಂದಿರುವ ಆಂಧ್ರಪ್ರದೇಶ ಮತ್ತು ಕರ್ನಾಟಕದ ಪರಸ್ಪರ ಆರೋಪಗಳ ಬಗೆಗೆ ಖುದ್ದು ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯೊಂದನ್ನು ರಚಿಸಲು ಕೈಗೊಂಡಿದ್ದ ತೀರ್ಮಾನವನ್ನು ಕೇಂದ್ರ ಸರ್ಕಾರ ಇಂದು ಕೈಬಿಟ್ಟಿತು.</p>.<p>ಆಂಧ್ರಪ್ರದೇಶದ ಹೈಕೋರ್ಟ್ ಮುಂದೆ ಈಗ ಆಲಮಟ್ಟಿ ಅಣೆಕಟ್ಟು ಎತ್ತರದ ಔಚಿತ್ಯವನ್ನು ಪ್ರಶ್ನಿಸಿರುವ ಅರ್ಜಿಯೊಂದು ವಿಚಾರಣೆಯಲ್ಲಿ ಇರುವುದರಿಂದ ಸಬ್ ಜುಡೀಸ್ ಆಗುವುದೆಂಬ ಕಾರಣವನ್ನು ಸರ್ಕಾರ ನೀಡಿದೆ.</p>.<p><strong>ಆಲಮಟ್ಟಿ: ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ</strong></p>.<p>ಬೆಂಗಳೂರು, ಆ. 13– ಆಲಮಟ್ಟಿ ಅಣೆಕಟ್ಟೆ ವಿಚಾರದಲ್ಲಿ ಸರ್ಕಾರ ತಪ್ಪುಹಾದಿ ತುಳಿಯುತ್ತಿದೆ ಎಂದು ಧರಣಿ ಹೂಡಿರುವ ಪ್ರತಿಪಕ್ಷಗಳ ಸದಸ್ಯರು, ಗದ್ದಲದ ನಡುವೆಯೇ ಇಂದು ವಿಧಾನಸಭೆಯಲ್ಲಿ ಜೆ.ಎಚ್.ಪಟೇಲ್ ನೇತೃತ್ವದ ಸಚಿವ ಸಂಪುಟದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>