ಬೆಂಗಳೂರು, ಸೆ.9– ನಗರದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಸುವುದನ್ನು ಪ್ರಬಲವಾಗಿ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಅದೇ ಸಂದರ್ಭದಲ್ಲಿ ಮಹಾ ಭಾರತದ ದ್ರೌಪದಿಯ ಸೀರೆ ಎಳೆದಾಗ, ರಾಮಾಯಣದ ಸೀತೆಯನ್ನು ರಾವಣ ಅಪಹರಿಸಿದಾಗ ಭಾರತೀಯ ಸಂಸ್ಕೃತಿ ಎಲ್ಲಿತ್ತು? ಎಂದು ಪ್ರಶ್ನಿಸಿರುವುದಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಲೋಕಸಭಾ ಸದಸ್ಯ ಅನಂತಕುಮಾರ್, ಶಾಸಕರಾದ ಎಸ್.ಸುರೇಶ್ ಕುಮಾರ್ ಮತ್ತು ವಾಟಾಳ್ ನಾಗರಾಜ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.