ಕೇಂದ್ರ ಸರ್ಕಾರಕ್ಕೆ ಬೆಂಬಲ ಅಚಲ: ಸೀತಾರಾಂ ಕೇಸರಿ ನವದೆಹಲಿ, ಸೆ. 24 (ಯುಎನ್ಐ)– ಸಂಯುಕ್ತರಂಗ ಸರ್ಕಾರಕ್ಕೆ ಬೆಂಬಲ ನೀಡುವ ಪಕ್ಷದ ನಿರ್ಧಾರವನ್ನು ಪುನರ್ ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಭಾರತ ರಾಷ್ಟ್ರೀಯ ಕಾಂಗ್ರೆಸ್ನ ನೂತನ ಅಧ್ಯಕ್ಷ ಸೀತಾರಾಂ ಕೇಸರಿ ಇಂದು ಇಲ್ಲಿ ಸ್ಪಷ್ಟಪಡಿಸಿದರು.
ಪಕ್ಷಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರಸಿಂಹ ರಾವ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿಯು ಸರ್ಕಾರವನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿತು ಎಂದು ಹೇಳಿದರು.
ಜೂನ್ನಿಂದ ಸಾರಾಯಿನಿಷೇಧ: ಮುಖ್ಯಮಂತ್ರಿ ಬೆಂಗಳೂರು, ಸೆ. 24– ಮುಂದಿನ ಜೂನ್ನಿಂದ ಸಾರಾಯಿ ನಿಷೇಧಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಇಂದು ಘೋಷಿಸಿದರು.