ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಸೋಮವಾರ 14.10.1996

Last Updated 13 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಸಡಗರದ ಮೈಸೂರು ದಸರಾ ಆರಂಭ

ಮೈಸೂರು, ಅ. 13– ಕನ್ನಡ ನಾಡಿನ ಹೆಮ್ಮೆಯ ನವರಾತ್ರಿಯ ಹಬ್ಬಕ್ಕೆ ಫಾಲ್ಕೆ ಪ್ರಶಸ್ತಿ ವಿಜೇತ ನಟ ಡಾ.ರಾಜಕುಮಾರ್ ಅವರು ಇಂದಿಲ್ಲಿ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದ ಮೇಲೆ ಮೈಸೂರು ಮಲ್ಲಿಗೆಯಿಂದ ಅಲಂಕರಿಸಿದ್ದ ಚಾಮುಂಡೇಶ್ವರಿಗೆ, ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದ ರಾಜಕುಮಾರ್ ಅವರು ತಮ್ಮ ಗಾಯನದ ಕಂಪನ್ನೂ ಪಸರಿಸಿ ನಾಡಹಬ್ಬದ ಕಹಳೆಯನ್ನು ಮೊಳಗಿಸಿದರು.

ಮೋಡಗಳ ಮಧ್ಯೆ ಪ್ರಖರವಾಗಿ ಉರಿಯುತ್ತಿದ್ದ ಬೆಳಗಿನ ಸೂರ್ಯನ ಸಾಕ್ಷಿಯಲ್ಲಿ ಇಡೀ ಬೆಟ್ಟವೇ ಹೊಳೆಯುತ್ತಿದ್ದು, ಮೈಸೂರು ನಗರದಲ್ಲಿ ಇನ್ನು ಹತ್ತು ದಿನಗಳ ಕಾಲ ಸಾಂಸ್ಕೃತಿಕ ಹಬ್ಬವಾಗಿ, ಪರಂಪರೆಯ ವೈಭವವನ್ನು ಮೆರೆಸುವ ದಸರಾ ರಾಜ್ ದಂಪತಿಗಳ ಆಗಮನದಿಂದ ಸಹಜವಾಗಿಯೇ ಸಡಗರವನ್ನು ಪಡೆದುಕೊಂಡಿತ್ತು.

ಸರ್ಕಾರ ರಚನೆಗೆ ಬಿಜೆಪಿ ಸನ್ನಾಹ

ನವದೆಹಲಿ, ಅ. 13 (ಯುಎನ್ಐ, ಪಿಟಿಐ)– ಉತ್ತರಪ್ರದೇಶದ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕೇಂದ್ರದ ಸಂಯುಕ್ತರಂಗ ಸರ್ಕಾರಕ್ಕೆ ಯಾವುದೇ ಬೆದರಿಕೆ ಒಡ್ಡಲು ಇಂದು ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿರಾಕರಿಸಿದೆ. ಈ ನಡುವೆ, ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲು ತಮ್ಮನ್ನು ಆಹ್ವಾನಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT