ನವದೆಹಲಿ, ಏ. 25 (ಪಿಟಿಐ)– ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದಾಗ ವಿದೇಶಿ ವಂತಿಗೆ ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ವಿದೇಶಿ ವಂತಿಗೆಯಾಗಿ ಜರ್ಮನಿಯಿಂದ ಮೂರು ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ ಎಂಬ ಆರೋಪ ಹೊತ್ತಿರುವ ಪಕ್ಷದ ಈಗಿನ ಅಧ್ಯಕ್ಷ ಸೀತಾರಾಂ ಕೇಸರಿ ಅವರಿಗೆ ದೆಹಲಿ ಹೈಕೋರ್ಟ್ ಇಂದು ಷೋಕಾಸು ನೋಟಿಸು ಜಾರಿ ಮಾಡಿದೆ.