ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ, 4–11–1997

Last Updated 3 ನವೆಂಬರ್ 2022, 19:45 IST
ಅಕ್ಷರ ಗಾತ್ರ

ಆಕ್ಟ್ರಾಯ್‌ ಪದ್ಧತಿ ಮರು ಜಾರಿಗೆ ಬಹುತೇಕ ಪೌರ ಸಂಸ್ಥೆಗಳ ಒಲವು

ಬೆಂಗಳೂರು, ನ. 3– ಅಕ್ಟ್ರಾಯ್‌ ಪದ್ಧತಿ ಪುನರ್‌ ಜಾರಿಗೆ ರಾಜ್ಯದ ಬಹುತೇಕ ಪೌರ ಸಂಸ್ಥೆಗಳು ಒಲವು ವ್ಯಕ್ತಪಡಿಸಿವೆ. ಈ ವಿಚಾರದಲ್ಲಿ ಉದ್ಯಮ– ವ್ಯಾಪಾರಿ ಸಮುದಾಯದ ಪ್ರತಿನಿಧಿಗಳು ಹಾಗೂ ವಿರೋಧ ಪಕ್ಷಗಳ ಜೊತೆಗೆ ಜತೆಗೆ ಚರ್ಚೆ ನಡೆಸಿ ಎರಡು ಮೂರು ತಿಂಗಳಲ್ಲಿ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಅಭಿವೃದ್ಧಿ ಕಾರ್ಯಗಳು ಹಾಗೂ ವೇತನ ನೀಡಲು ಹಣಕಾಸು ಕೊರತೆ ಎದುರಿಸುತ್ತಿರುವ ಪೌರ ಸಂಸ್ಥೆಗಳ ಸಮಸ್ಯೆ ಕುರಿತು ಚರ್ಚಿಸಲು ಇಂದು ಕರೆದಿದ್ದ ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ಮೇಯರ್‌, ಅಧ್ಯಕ್ಷರು, ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳ ಸಭೆಯಲ್ಲಿ ಅಕ್ಟ್ರಾಯ್‌ ಪದ್ಧತಿ ಪುನರ್‌ ಜಾರಿಗೆ ಒಲವು ವ್ಯಕ್ತವಾಯಿತು.

ಕಾಂಗ್ರೆಸ್‌ನಲ್ಲಿ ಒಡಕಿನ ಭೀತಿ: 9ರಂದು ಕಾರ್ಯಕಾರಿ ಸಭೆ

ನವದೆಹಲಿ, ನ.3 (ಪಿಟಿಐ): ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಆದ ಒಡಕಿನಿಂದ ತಲ್ಲಣಗೊಂಡಿರುವ ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲೂ ಇಂತಹುದೇ ಪರಿಸ್ಥಿತಿ ನಿರ್ಮಾಣವಾಗಲಿ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ಈ ತಿಂಗಳ 9ರಂದು ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ರಾಜಕೀಯ ಬೆಳವಣಿಗೆಯಿಂದಾಗಿ ಪಕ್ಷಕ್ಕೆ ಉಂಟಾದ ಹಿನ್ನಡೆಯ ಬಗ್ಗೆ ಪಕ್ಷದ ನಾಯಕರು ಚಿಂತೆಗೊಳಗಾಗಿದ್ದಾರೆ.

ಕೇಂದ್ರದಲ್ಲಿ ಪಕ್ಷ ಇಬ್ಬಾಗವಾಗಿ ಹೊಸ ಸಮ್ಮಿಶ್ರ ಸರ್ಕಾರ ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂಬ ವರದಿಗಳನ್ನು ಅವರು ತಳ್ಳಿ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT