ಡಿಎಂಕೆ, ವಿ.ಪಿ. ಸಿಂಗ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ
ನವದೆಹಲಿ, ನ.17– ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಆಯೋಗ ತನ್ನ ಮಧ್ಯಂತರ ವರದಿಯಲ್ಲಿ ದೋಷಾರೋಪಣೆ ಹೊರಿಸಿರುವುದರಿಂದ, ಡಿಎಂಕೆ ಮತ್ತು ಮಾಜಿ ಪ್ರಧಾನಿ ವಿ.ಪಿ. ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಇಂದು ಒತ್ತಾಯಿಸಿದೆ.