<p><strong>ಈ ವರ್ಷ 40 ಶನಿವಾರ ದಿನಪೂರ್ತಿ ಶಾಲೆ</strong></p>.<p>ಬೆಂಗಳೂರು, ನ. 20– ಜನಗಣತಿ ಮತ್ತು ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಿದ ಹಿನ್ನೆಲೆ ಯಲ್ಲಿ ಈ ವರ್ಷ 40 ಶನಿವಾರಗಳಲ್ಲಿ ಪೂರ್ಣ ದಿನ ಶಾಲೆ ನಡೆಸಲಾಗುತ್ತದೆ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹ್ಮದ್ ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಕಾಂಗ್ರೆಸ್ನ ರಾಮಲಿಂಗಾರೆಡ್ಡಿ ಅವರಿಗೆ ಶಿಕ್ಷಣ ಸಚಿವರ ಪರವಾಗಿ ಉತ್ತರ ನೀಡುತ್ತಾ, ಈ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಜನಗಣತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದರು.</p>.<p><strong>ಸೆನೆಟ್ ರದ್ದು, ಕುಲಪತಿ ಅಧಿಕಾರ ಮೊಟಕು</strong></p>.<p>ಬೆಂಗಳೂರು, ನ. 20– ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸೆನೆಟ್ ಅನ್ನು ರದ್ದುಪಡಿಸುವುದು ಮತ್ತು ಕುಲಪತಿಗಳ ನೇಮಕಕ್ಕೆ ಸಮಿತಿ ರಚಿಸುವ ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವುದು ಮುಂತಾದ ಪ್ರಮುಖ ಬದಲಾವಣೆಗಳಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆಯನ್ನು ಸಚಿವ ಸಂಪುಟ ಅನುಮೋದಿಸಿದ್ದು, ಇದೇ ಅಧಿವೇಶನ ದಲ್ಲಿ ಅದು ಮಂಡನೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಈ ವರ್ಷ 40 ಶನಿವಾರ ದಿನಪೂರ್ತಿ ಶಾಲೆ</strong></p>.<p>ಬೆಂಗಳೂರು, ನ. 20– ಜನಗಣತಿ ಮತ್ತು ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಿದ ಹಿನ್ನೆಲೆ ಯಲ್ಲಿ ಈ ವರ್ಷ 40 ಶನಿವಾರಗಳಲ್ಲಿ ಪೂರ್ಣ ದಿನ ಶಾಲೆ ನಡೆಸಲಾಗುತ್ತದೆ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹ್ಮದ್ ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಕಾಂಗ್ರೆಸ್ನ ರಾಮಲಿಂಗಾರೆಡ್ಡಿ ಅವರಿಗೆ ಶಿಕ್ಷಣ ಸಚಿವರ ಪರವಾಗಿ ಉತ್ತರ ನೀಡುತ್ತಾ, ಈ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಜನಗಣತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದರು.</p>.<p><strong>ಸೆನೆಟ್ ರದ್ದು, ಕುಲಪತಿ ಅಧಿಕಾರ ಮೊಟಕು</strong></p>.<p>ಬೆಂಗಳೂರು, ನ. 20– ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸೆನೆಟ್ ಅನ್ನು ರದ್ದುಪಡಿಸುವುದು ಮತ್ತು ಕುಲಪತಿಗಳ ನೇಮಕಕ್ಕೆ ಸಮಿತಿ ರಚಿಸುವ ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವುದು ಮುಂತಾದ ಪ್ರಮುಖ ಬದಲಾವಣೆಗಳಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆಯನ್ನು ಸಚಿವ ಸಂಪುಟ ಅನುಮೋದಿಸಿದ್ದು, ಇದೇ ಅಧಿವೇಶನ ದಲ್ಲಿ ಅದು ಮಂಡನೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>