<p><strong>ಅಗತ್ಯಕ್ಕೆ ತಕ್ಕಂತೆ ಹಣ ಹಂಚಿಕೆಗೆ ಆಗ್ರಹ</strong></p><p>ಬೆಂಗಳೂರು, ಮೇ 28– ರಾಷ್ಟ್ರದ ಸಂಯುಕ್ತ ರಾಜ್ಯ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿ<br>ಯಿಂದ ಪ್ರತಿಯೊಂದು ರಾಜ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಣಕಾಸಿನ ವ್ಯವಹಾರದಲ್ಲಿ ಸ್ಥಿರತೆ ತರುವ ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಪನ್ಮೂಲಗಳ ಹಂಚಿಕೆ ಆಗಬೇಕೆಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಒತ್ತಾಯಿಸಿದರು.</p><p>ಉದಾರೀಕರಣ ಹಾಗೂ ಜಾಗತೀಕರಣ ಹಿನ್ನೆಲೆಯಲ್ಲಿ ಸಂಪನ್ಮೂಲ ಹಂಚಿಕೆಯಲ್ಲಿ ಹಿಂದಿನ ಆಯೋಗಗಳು ಅನುಸರಿಸಿದ ಮಾನದಂಡಗಳಿಗೆ ಬದಲಾಗಿ 21ನೇ ಶತಮಾನಕ್ಕೆ ದಿಕ್ಸೂಚಿಯಾಗುವಂತಹ ಬದಲಿ ಮಾನದಂಡಗಳನ್ನು ಅನುಸರಿಸಬೇಕೆಂದು ಅವರು ರಾಜ್ಯಕ್ಕೆ ಭೇಟಿ ನೀಡಿರುವ 11ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಅಹವಾಲನ್ನು ಮಂಡಿಸಿದರು.</p><p><strong>ಉಗ್ರಗಾಮಿಗಳಿಂದ ಸೇನಾ ಹೆಲಿಕಾಪ್ಟರ್ ನಾಶ– 4 ಸಾವು</strong></p><p>ನವದೆಹಲಿ, ಮೇ 28 (ಪಿಟಿಐ)– ಜಮ್ಮು– ಕಾಶ್ಮೀರದ ಡ್ರಾಸ್ ವಲಯದಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ವಿರುದ್ಧದ ಮುಂದುವರಿದ ಕಾರ್ಯಾಚರಣೆಯಲ್ಲಿ ಇಂದು ಪಾಲ್ಗೊಂಡಿದ್ದ ಭಾರತೀಯ ವಾಯುಪಡೆಯ ಎಂಐ–17 ಹೆಲಿಕಾಪ್ಟರ್ ಅನ್ನು ಪಾಕ್ ಬೆಂಬಲಿತ ಉಗ್ರಗಾಮಿಗಳು ಕ್ಷಿಪಣಿ ಉಡಾಯಿಸಿ ಹೊಡೆದುರುಳಿಸಿದ್ದಾರೆ.</p><p>ಈ ದಾಳಿಯಲ್ಲಿ ಇಬ್ಬರು ಚಾಲಕ ಸಿಬ್ಬಂದಿಯೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.</p><p>ಈ ಮಧ್ಯೆ ವಾಸ್ತವ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆಯನ್ನು ಜಮಾಯಿಸುತ್ತಿದೆ ಎಂದು ಭಾರತ ಆರೋಪಿಸಿದ್ದು, ಇದರಿಂದ ಶಿಮ್ಲಾ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗತ್ಯಕ್ಕೆ ತಕ್ಕಂತೆ ಹಣ ಹಂಚಿಕೆಗೆ ಆಗ್ರಹ</strong></p><p>ಬೆಂಗಳೂರು, ಮೇ 28– ರಾಷ್ಟ್ರದ ಸಂಯುಕ್ತ ರಾಜ್ಯ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿ<br>ಯಿಂದ ಪ್ರತಿಯೊಂದು ರಾಜ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಣಕಾಸಿನ ವ್ಯವಹಾರದಲ್ಲಿ ಸ್ಥಿರತೆ ತರುವ ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಪನ್ಮೂಲಗಳ ಹಂಚಿಕೆ ಆಗಬೇಕೆಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಒತ್ತಾಯಿಸಿದರು.</p><p>ಉದಾರೀಕರಣ ಹಾಗೂ ಜಾಗತೀಕರಣ ಹಿನ್ನೆಲೆಯಲ್ಲಿ ಸಂಪನ್ಮೂಲ ಹಂಚಿಕೆಯಲ್ಲಿ ಹಿಂದಿನ ಆಯೋಗಗಳು ಅನುಸರಿಸಿದ ಮಾನದಂಡಗಳಿಗೆ ಬದಲಾಗಿ 21ನೇ ಶತಮಾನಕ್ಕೆ ದಿಕ್ಸೂಚಿಯಾಗುವಂತಹ ಬದಲಿ ಮಾನದಂಡಗಳನ್ನು ಅನುಸರಿಸಬೇಕೆಂದು ಅವರು ರಾಜ್ಯಕ್ಕೆ ಭೇಟಿ ನೀಡಿರುವ 11ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಅಹವಾಲನ್ನು ಮಂಡಿಸಿದರು.</p><p><strong>ಉಗ್ರಗಾಮಿಗಳಿಂದ ಸೇನಾ ಹೆಲಿಕಾಪ್ಟರ್ ನಾಶ– 4 ಸಾವು</strong></p><p>ನವದೆಹಲಿ, ಮೇ 28 (ಪಿಟಿಐ)– ಜಮ್ಮು– ಕಾಶ್ಮೀರದ ಡ್ರಾಸ್ ವಲಯದಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ವಿರುದ್ಧದ ಮುಂದುವರಿದ ಕಾರ್ಯಾಚರಣೆಯಲ್ಲಿ ಇಂದು ಪಾಲ್ಗೊಂಡಿದ್ದ ಭಾರತೀಯ ವಾಯುಪಡೆಯ ಎಂಐ–17 ಹೆಲಿಕಾಪ್ಟರ್ ಅನ್ನು ಪಾಕ್ ಬೆಂಬಲಿತ ಉಗ್ರಗಾಮಿಗಳು ಕ್ಷಿಪಣಿ ಉಡಾಯಿಸಿ ಹೊಡೆದುರುಳಿಸಿದ್ದಾರೆ.</p><p>ಈ ದಾಳಿಯಲ್ಲಿ ಇಬ್ಬರು ಚಾಲಕ ಸಿಬ್ಬಂದಿಯೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.</p><p>ಈ ಮಧ್ಯೆ ವಾಸ್ತವ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆಯನ್ನು ಜಮಾಯಿಸುತ್ತಿದೆ ಎಂದು ಭಾರತ ಆರೋಪಿಸಿದ್ದು, ಇದರಿಂದ ಶಿಮ್ಲಾ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>