‘ಹಾಲಿ ಇರುವ ಗ್ರಾಮ ಪಂಚಾಯ್ತಿ ವ್ಯವಸ್ಥೆಯಲ್ಲಿ ಹಲವಾರು ನ್ಯೂನತೆಗಳಿದ್ದು, ಈ ವ್ಯವಸ್ಥೆಯಲ್ಲೇ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ; ವ್ಯವಸ್ಥೆಯಲ್ಲಿ ಬದಲಾವಣೆ ತಂದ ನಂತರವೇ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಹಾಗೂ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಸಂಪುಟ ಸಭೆ ನಿರ್ಧರಿಸಿದೆ’ ಎಂದು ಸಭೆಯ ನಂತರ ವರದಿಗಾರರೊಂದಿಗೆ ಮಾತನಾಡಿದ ವಾರ್ತಾ ಸಚಿವ ಎಂ.ಸಿ ನಾಣಯ್ಯ ತಿಳಿಸಿದರು.