ಬೆಂಗಳೂರು, ಜ. 19 - ರಾಜ್ಯ ಜನತಾ ದಳದ ಅಧ್ಯಕ್ಷ ಸ್ಥಾನದಿಂದ ಬಿ.ಎಲ್.ಶಂಕರ್ ಅವರನ್ನು ಪದಚ್ಯುತಿಗೊಳಿಸಿದ ವಿಧಾನದ ಬಗ್ಗೆ ಹಿರಿಯ ಒಕ್ಕಲಿಗ ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದಲ್ಲಿ ಉದ್ಭವಿಸಿದ್ದ ಹೊಸ ಬಿಕ್ಕಟ್ಟು ಇಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಮಧ್ಯಸ್ಥಿಕೆಯಿಂದಾಗಿ ಸದ್ಯಕ್ಕೆ ಬಗೆಹರಿದಿದೆ.