ಹುಬ್ಬಳ್ಳಿ, ಮಾರ್ಚ್ 25– ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದ ಇತ್ಯರ್ಥ ಕ್ಕಾಗಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ರಚಿಸಲಾಗಿರುವ ಪಂಚ ಮಠಾಧೀಶ ಸಮಿತಿಗೆ ರಾಜೀನಾಮೆ ನೀಡಿರುವುದಾಗಿ ಸಮಿತಿಯ ಇನ್ನೊಬ್ಬ ಸದಸ್ಯ ಸಾವಳಗಿ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಅವರು ಇಂದು ಪ್ರಕಟಿಸಿದ್ದಾರೆ.