<p><strong>ಅವ್ಯವಹಾರ: ಹಾಪ್ಸ್ಕಾಮ್ಸ್ ಆಡಳಿತ ಮಂಡಳಿ ರದ್ದು</strong></p>.<p>ಬೆಂಗಳೂರು, ಮಾರ್ಚ್ 28– ತೋಟಗಾರಿಗೆ ಉತ್ಪನ್ನಗಳ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸಂಘದ (ಹಾಪ್ಸ್ಕಾಮ್ಸ್) ಆಡಳಿತ ಮಂಡಳಿಯನ್ನು ರದ್ದುಪಡಿಸಿರುವ ಸರ್ಕಾರ, ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ.</p>.<p>ಹಾಪ್ಸ್ಕಾಮ್ಸ್ನಲ್ಲಿ ನಡೆದಿದೆ ಎನ್ನಲಾದ ಭಾರಿ ಪ್ರಮಾಣದ ಹಣ ದುರುಪಯೋಗ ಹಾಗೂ ಇನ್ನಿತರ ಅಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರ ಆಡಳಿತ ಮಂಡಳಿಯನ್ನು ರದ್ದುಪಡಿಸಿದೆ. ಕಳೆದ 5–6 ವರ್ಷಗಳಿಂದ ಸಂಘದ ಲೆಕ್ಕಪತ್ರಗಳ ತಪಾಸಣೆಯೂ ಆಗಿಲ್ಲ ಎಂದು ಆರೋಪಿಸಲಾಗಿದೆ.</p>.<p>ಅಲ್ಲದೆ, ಕಳೆದ 10ರಿಂದ 15 ವರ್ಷಗಳ ಅವಧಿಯಲ್ಲಿ ಹಾಪ್ಸ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಧಿಕಾರಿಗಳೇ ಹಣ ದುರುಪಯೋಗದಲ್ಲಿ ಭಾಗಿಯಾಗಿದ್ದಾರೆ ಎಂಬ ಅಂಶ ಈ ಹಿಂದೆ ಆಗಿರುವ ಲೆಕ್ಕಪತ್ರಗಳ ತಪಾಸಣೆಯ ವರದಿಯಿಂದ ಬೆಳಕಿಗೆ ಬಂದಿದೆ.</p>.<p>ಮೂರುಸಾವಿರ ಮಠಕ್ಕೆ ಹಾನಗಲ್ಸ್ವಾಮಿ ಉತ್ತರಾಧಿಕಾರಿ</p>.<p>ಹುಬ್ಬಳ್ಳಿ, ಮಾರ್ಚ್ 28– ಹಲವಾರು ದಿನಗಳಿಂದ ಕುತೂಹಲದ ಕೇಂದ್ರವಾಗಿದ್ದ ಹುಬ್ಬಳ್ಳಿಯ ಪ್ರತಿಷ್ಠಿತ ಮೂರುಸಾವಿರ ಮಠದ ಉತ್ತರಾಧಿಕಾರಿಯಾಗಿ ಇಂದು ಹಾನಗಲ್ ಕುಮಾರ ಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ನಾಳೆ ನಗರದಲ್ಲಿ ವಿಧ್ಯುಕ್ತವಾಗಿ ಅವರ ಪಟ್ಟಾಭಿಷೇಕ ನಡೆಯಲಿದೆ.</p>.<p>ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮಿಗಳು, ಮುಂಡರಗಿ ಅನ್ನದಾನೇಶ್ವರ ಸ್ವಾಮಿಗಳು, ಬೈಲಹೊಂಗಲದ ಗಂಗಾಧರ ಸ್ವಾಮಿಗಳು, ಆನಂದಪುರದ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಮೂರುಸಾವಿರ ಮಠದ ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ ಸಮ್ಮುಖದಲ್ಲಿ ನಡೆದ ಭಕ್ತರು ಹಾಗೂ ಗಣ್ಯರು ಸಭೆಯಲ್ಲಿ ಇಂದು ಈ ನಿರ್ಧಾರ ಕೈಗೊಳ್ಳಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅವ್ಯವಹಾರ: ಹಾಪ್ಸ್ಕಾಮ್ಸ್ ಆಡಳಿತ ಮಂಡಳಿ ರದ್ದು</strong></p>.<p>ಬೆಂಗಳೂರು, ಮಾರ್ಚ್ 28– ತೋಟಗಾರಿಗೆ ಉತ್ಪನ್ನಗಳ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸಂಘದ (ಹಾಪ್ಸ್ಕಾಮ್ಸ್) ಆಡಳಿತ ಮಂಡಳಿಯನ್ನು ರದ್ದುಪಡಿಸಿರುವ ಸರ್ಕಾರ, ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ.</p>.<p>ಹಾಪ್ಸ್ಕಾಮ್ಸ್ನಲ್ಲಿ ನಡೆದಿದೆ ಎನ್ನಲಾದ ಭಾರಿ ಪ್ರಮಾಣದ ಹಣ ದುರುಪಯೋಗ ಹಾಗೂ ಇನ್ನಿತರ ಅಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರ ಆಡಳಿತ ಮಂಡಳಿಯನ್ನು ರದ್ದುಪಡಿಸಿದೆ. ಕಳೆದ 5–6 ವರ್ಷಗಳಿಂದ ಸಂಘದ ಲೆಕ್ಕಪತ್ರಗಳ ತಪಾಸಣೆಯೂ ಆಗಿಲ್ಲ ಎಂದು ಆರೋಪಿಸಲಾಗಿದೆ.</p>.<p>ಅಲ್ಲದೆ, ಕಳೆದ 10ರಿಂದ 15 ವರ್ಷಗಳ ಅವಧಿಯಲ್ಲಿ ಹಾಪ್ಸ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಧಿಕಾರಿಗಳೇ ಹಣ ದುರುಪಯೋಗದಲ್ಲಿ ಭಾಗಿಯಾಗಿದ್ದಾರೆ ಎಂಬ ಅಂಶ ಈ ಹಿಂದೆ ಆಗಿರುವ ಲೆಕ್ಕಪತ್ರಗಳ ತಪಾಸಣೆಯ ವರದಿಯಿಂದ ಬೆಳಕಿಗೆ ಬಂದಿದೆ.</p>.<p>ಮೂರುಸಾವಿರ ಮಠಕ್ಕೆ ಹಾನಗಲ್ಸ್ವಾಮಿ ಉತ್ತರಾಧಿಕಾರಿ</p>.<p>ಹುಬ್ಬಳ್ಳಿ, ಮಾರ್ಚ್ 28– ಹಲವಾರು ದಿನಗಳಿಂದ ಕುತೂಹಲದ ಕೇಂದ್ರವಾಗಿದ್ದ ಹುಬ್ಬಳ್ಳಿಯ ಪ್ರತಿಷ್ಠಿತ ಮೂರುಸಾವಿರ ಮಠದ ಉತ್ತರಾಧಿಕಾರಿಯಾಗಿ ಇಂದು ಹಾನಗಲ್ ಕುಮಾರ ಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ನಾಳೆ ನಗರದಲ್ಲಿ ವಿಧ್ಯುಕ್ತವಾಗಿ ಅವರ ಪಟ್ಟಾಭಿಷೇಕ ನಡೆಯಲಿದೆ.</p>.<p>ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮಿಗಳು, ಮುಂಡರಗಿ ಅನ್ನದಾನೇಶ್ವರ ಸ್ವಾಮಿಗಳು, ಬೈಲಹೊಂಗಲದ ಗಂಗಾಧರ ಸ್ವಾಮಿಗಳು, ಆನಂದಪುರದ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಮೂರುಸಾವಿರ ಮಠದ ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ ಸಮ್ಮುಖದಲ್ಲಿ ನಡೆದ ಭಕ್ತರು ಹಾಗೂ ಗಣ್ಯರು ಸಭೆಯಲ್ಲಿ ಇಂದು ಈ ನಿರ್ಧಾರ ಕೈಗೊಳ್ಳಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>