ನವದೆಹಲಿ, ಮಾರ್ಚ್ 29 (ಯುಎನ್ಐ, ಪಿಟಿಐ)– ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂದು ಪ್ರಧಾನಿ ಎ.ಬಿ. ವಾಜಪೇಯಿ ಅವರು ನಿನ್ನೆ ಖಡಾಖಂಡಿತ ವಾಗಿ ಘೋಷಿಸಿದ್ದರೂ, ರಾಷ್ಟ್ರದ ಭದ್ರತೆ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ಜಾರ್ಜ್ ಅವರ ಖಾತೆ ಬದಲಾಯಿಸಬೇಕು ಎಂದು ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೇಲಿನ ತಮ್ಮ ಒತ್ತಡವನ್ನು ತೀವ್ರಗೊಳಿಸಿದ್ದಾರೆ.