ನವದೆಹಲಿ, ಜೂನ್ 6 (ಪಿಟಿಐ): ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಲು ಭರದ ಸಿದ್ಧತೆ ನಡೆದಿದ್ದು, ಸುಪ್ರೀಂಕೋರ್ಟ್ ಸೇರಿದಂತೆ ಭೂಮಿಯಲ್ಲಿನ ಯಾವುದೇ ಶಕ್ತಿ ಅದನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದು ಪರಿಷತ್ತಿನ (ವಿಎಚ್ಪಿ) ಪ್ರಧಾನ ಕಾರ್ಯದರ್ಶಿ ಆಚಾರ್ಯ ಗಿರಿರಾಜ ಕಿಶೋರ್ ಅವರು ಹೇಳಿದ್ದಾರೆ.