<p><strong>ಉಗ್ರರ ತೆರವು ನಂತರ ಚರ್ಚೆ: ಭಾರತ ಸ್ಪಷ್ಟನೆ</strong></p>.<p>ನವದೆಹಲಿ, ಜೂನ್ 27– ಪಾಕಿಸ್ತಾನವು ಶಸ್ತ್ರ ಸಜ್ಜಿತ ಅತಿಕ್ರಮಣಕಾರರನ್ನು ಕಾರ್ಗಿಲ್ನಿಂದ ವಾಪಸ್ ಕರೆಸಿಕೊಳ್ಳುವ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡರೆ ಮಾತ್ರ ಆ ರಾಷ್ಟ್ರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭಾರತವು ಅಮೆರಿಕಕ್ಕೆ ಸ್ಪಷ್ಟವಾಗಿ ಹೇಳಿದೆ.</p>.<p>ಈ ನಡುವೆ, ಕಾರ್ಗಿಲ್ ವಲಯದೊಳಕ್ಕೆ ನುಸುಳಿರುವ ಪಾಕಿಸ್ತಾನಿ ಸೈನಿಕರು ಮತ್ತು ಅತಿಕ್ರಮಣಕಾರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸುವ ಯಾವುದೇ ಸೂತ್ರವನ್ನು ಅಮೆರಿಕವು ಭಾರತದ ಮುಂದಿಟ್ಟಿಲ್ಲ.</p>.<p>ಅಮೆರಿಕದ ವಿದೇಶಾಂಗ ಖಾತೆ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿ ಗಿಬ್ಸನ್ ಲ್ಯಾಂಫೆರ್ ಇಂದು ಇಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದರು.</p>.<p><strong>ಭಿನ್ನರನ್ನು ಹೊರದಬ್ಬಲು ದಳ ತೀರ್ಮಾನ</strong></p>.<p>ಬೆಂಗಳೂರು, ಜೂನ್ 27– ಪಕ್ಷದಲ್ಲಿ ಇದ್ದುಕೊಂಡೇ ಬೇರೆ ಪಕ್ಷಗಳಿಗೆ ಜಿಗಿಯಲು ತುದಿಗಾಲಲ್ಲಿ ನಿಂತಿರುವವರಿಗೆ ಬಾಗಿಲು ತೆಗೆದು ಹೊರ ಕಳುಹಿಸಲು ಜನತಾದಳ ಸದ್ಯದಲ್ಲೇ ನಿರ್ಣಯ ಕೈಗೊಳ್ಳಲಿದೆ.</p>.<p>ಜನತಾದಳ ಶಾಸಕಾಂಗ ಪಕ್ಷ ಸದ್ಯದಲ್ಲೇ ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸತ್ ಸದಸ್ಯ ಖಮರುಲ್ ಇಸ್ಲಾಂ ಅವರಿಗೆ ಪಕ್ಷ ಬಿಟ್ಟು ಹೋಗಲು ನಾಳೆಯೇ ಕಟ್ಟುನಿಟ್ಟಿನ ಆದೇಶ ನೀಡುವ ಸಾಧ್ಯತೆ ಇದೆ.</p>.<p>ಇತರೆ ಪಕ್ಷಗಳ ಜತೆಗೆ ಹೊಂದಾಣಿಕೆ ವಿಚಾರದಲ್ಲಿ ಪಕ್ಷದ ಕೆಲವು ಮಂದಿ ನಾನಾ ರೀತಿಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಸೃಷ್ಟಿಸಿರುವ ನಿಟ್ಟಿನಲ್ಲಿ ಪಕ್ಷದ ಮೇಲೆ ಆಗಿರುವ ಪರಿಣಾಮ ಕುರಿತಂತೆ ಮಾಜಿ ಪ್ರಧಾನಿ <br>ಎಚ್.ಡಿ. ದೇವೇಗೌಡ, ಕೇಂದ್ರದ ಮಾಜಿ ಸಚಿವ ಎಸ್.ಆರ್. ಬೊಮ್ಮಾಯಿ, ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಹಾಗೂ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಸುದೀರ್ಘ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗ್ರರ ತೆರವು ನಂತರ ಚರ್ಚೆ: ಭಾರತ ಸ್ಪಷ್ಟನೆ</strong></p>.<p>ನವದೆಹಲಿ, ಜೂನ್ 27– ಪಾಕಿಸ್ತಾನವು ಶಸ್ತ್ರ ಸಜ್ಜಿತ ಅತಿಕ್ರಮಣಕಾರರನ್ನು ಕಾರ್ಗಿಲ್ನಿಂದ ವಾಪಸ್ ಕರೆಸಿಕೊಳ್ಳುವ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡರೆ ಮಾತ್ರ ಆ ರಾಷ್ಟ್ರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭಾರತವು ಅಮೆರಿಕಕ್ಕೆ ಸ್ಪಷ್ಟವಾಗಿ ಹೇಳಿದೆ.</p>.<p>ಈ ನಡುವೆ, ಕಾರ್ಗಿಲ್ ವಲಯದೊಳಕ್ಕೆ ನುಸುಳಿರುವ ಪಾಕಿಸ್ತಾನಿ ಸೈನಿಕರು ಮತ್ತು ಅತಿಕ್ರಮಣಕಾರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸುವ ಯಾವುದೇ ಸೂತ್ರವನ್ನು ಅಮೆರಿಕವು ಭಾರತದ ಮುಂದಿಟ್ಟಿಲ್ಲ.</p>.<p>ಅಮೆರಿಕದ ವಿದೇಶಾಂಗ ಖಾತೆ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿ ಗಿಬ್ಸನ್ ಲ್ಯಾಂಫೆರ್ ಇಂದು ಇಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದರು.</p>.<p><strong>ಭಿನ್ನರನ್ನು ಹೊರದಬ್ಬಲು ದಳ ತೀರ್ಮಾನ</strong></p>.<p>ಬೆಂಗಳೂರು, ಜೂನ್ 27– ಪಕ್ಷದಲ್ಲಿ ಇದ್ದುಕೊಂಡೇ ಬೇರೆ ಪಕ್ಷಗಳಿಗೆ ಜಿಗಿಯಲು ತುದಿಗಾಲಲ್ಲಿ ನಿಂತಿರುವವರಿಗೆ ಬಾಗಿಲು ತೆಗೆದು ಹೊರ ಕಳುಹಿಸಲು ಜನತಾದಳ ಸದ್ಯದಲ್ಲೇ ನಿರ್ಣಯ ಕೈಗೊಳ್ಳಲಿದೆ.</p>.<p>ಜನತಾದಳ ಶಾಸಕಾಂಗ ಪಕ್ಷ ಸದ್ಯದಲ್ಲೇ ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸತ್ ಸದಸ್ಯ ಖಮರುಲ್ ಇಸ್ಲಾಂ ಅವರಿಗೆ ಪಕ್ಷ ಬಿಟ್ಟು ಹೋಗಲು ನಾಳೆಯೇ ಕಟ್ಟುನಿಟ್ಟಿನ ಆದೇಶ ನೀಡುವ ಸಾಧ್ಯತೆ ಇದೆ.</p>.<p>ಇತರೆ ಪಕ್ಷಗಳ ಜತೆಗೆ ಹೊಂದಾಣಿಕೆ ವಿಚಾರದಲ್ಲಿ ಪಕ್ಷದ ಕೆಲವು ಮಂದಿ ನಾನಾ ರೀತಿಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಸೃಷ್ಟಿಸಿರುವ ನಿಟ್ಟಿನಲ್ಲಿ ಪಕ್ಷದ ಮೇಲೆ ಆಗಿರುವ ಪರಿಣಾಮ ಕುರಿತಂತೆ ಮಾಜಿ ಪ್ರಧಾನಿ <br>ಎಚ್.ಡಿ. ದೇವೇಗೌಡ, ಕೇಂದ್ರದ ಮಾಜಿ ಸಚಿವ ಎಸ್.ಆರ್. ಬೊಮ್ಮಾಯಿ, ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಹಾಗೂ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಸುದೀರ್ಘ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>