ನವದೆಹಲಿ, ಡಿ. 11 (ಪಿಟಿಐ, ಯುಎನ್ಐ)– ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ಹಲವಾರು ಕಾರ್ಮಿಕ ಸಂಘಗಳು ಇಂದು ಕರೆ ನೀಡಿದ್ದ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರದಿಂದಾಗಿ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.
ಸಂಸತ್ತಿನ ಮುಂದೆ ಕಾಂಗ್ರೆಸ್ಸೇತರ ವಿರೋಧ ಪಕ್ಷಗಳ ಸಂಸತ್ ಸದಸ್ಯರು ಸರ್ಕಾರದ ತಪ್ಪು ಆರ್ಥಿಕ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ನೇತೃತ್ವದ ಸರ್ಕಾರ ಬೆಲೆ ಏರಿಕೆಯನ್ನು ತಡೆಗಟ್ಟಲು ವಿಫಲವಾಗಿದೆ ಎಂದು ದೂರಿದರು.