<p><strong>ಕೌಲ್ ರಾಜೀನಾಮೆಗೆ ಹೆಚ್ಚುತ್ತಿರುವ ಒತ್ತಡ</strong></p>.<p><strong>ನವದೆಹಲಿ, ಏ. 18 (ಪಿಟಿಐ)–</strong> ವಸತಿ ಹಗರಣದಲ್ಲಿ ತಮ್ಮ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಧಿಕಾರ ತ್ಯಾಗ ಮಾಡಲು ಹಿಮಾಚಲ ಪ್ರದೇಶದ ರಾಜ್ಯಪಾಲೆ ಶೀಲಾ ಕೌಲ್ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ.</p>.<p>ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರಿಗೆ ಸೂಚಿಸಿದ್ದಾರೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ಶೀಲಾ ಕೌಲ್ ಅವರು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಬಹುದು ಎಂಬ ಗುಲ್ಲು ಶಿಮ್ಲಾ ಮತ್ತು ದೆಹಲಿಯಲ್ಲಿ ಇಂದು ಹರಡಿತ್ತು.</p>.<p><strong>ಚುನಾವಣಾ ಫಲಿತಾಂಶ ಶೀಘ್ರ ಪ್ರಕಟಣೆಗೆ ಆಯೋಗದ ಕ್ರಮ</strong></p>.<p><strong>ನವದೆಹಲಿ, ಏ. 18 (ಪಿಟಿಐ)–</strong> ಗೆಲ್ಲುವ ಹಾಗೂ ಸೋಲುವ ಅಭ್ಯರ್ಥಿಗಳ ನಡುವಿನ ಅಂತರ ಒಟ್ಟು ಮತದಾನದ ಶೇಕಡ ಐದಕ್ಕಿಂತ ಹೆಚ್ಚಿದ್ದರೆ ವಿಳಂಬ ಮಾಡದೇ ಫಲಿತಾಂಶ ಪ್ರಕಟಿಸಲು ಚುನಾವಣಾ ಅಧಿಕಾರಿಗೇ ಅಧಿಕಾರ ನೀಡುವ ಮಹತ್ವದ ನಿರ್ಧಾರವನ್ನು ಚುನಾವಣಾ ಆಯೋಗ ಇಂದು ತೆಗೆದುಕೊಂಡಿತು.</p>.<p>ಈ ಅಂತರ ಶೇಕಡ ಐದಕ್ಕಿಂತ ಕಡಿಮೆ ಇದ್ದರೆ ಫಲಿತಾಂಶ ಪ್ರಕಟಕ್ಕೆ ಮುನ್ನ ಚುನಾವಣಾ ಅಧಿಕಾರಿಗಳು ಆಯೋಗದ ಅನುಮತಿ ಪಡೆದುಕೊಳ್ಳಬೇಕು ಎಂದು ಆಯೋಗದ ವಕ್ತಾರರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಲ್ ರಾಜೀನಾಮೆಗೆ ಹೆಚ್ಚುತ್ತಿರುವ ಒತ್ತಡ</strong></p>.<p><strong>ನವದೆಹಲಿ, ಏ. 18 (ಪಿಟಿಐ)–</strong> ವಸತಿ ಹಗರಣದಲ್ಲಿ ತಮ್ಮ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಧಿಕಾರ ತ್ಯಾಗ ಮಾಡಲು ಹಿಮಾಚಲ ಪ್ರದೇಶದ ರಾಜ್ಯಪಾಲೆ ಶೀಲಾ ಕೌಲ್ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ.</p>.<p>ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರಿಗೆ ಸೂಚಿಸಿದ್ದಾರೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ಶೀಲಾ ಕೌಲ್ ಅವರು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಬಹುದು ಎಂಬ ಗುಲ್ಲು ಶಿಮ್ಲಾ ಮತ್ತು ದೆಹಲಿಯಲ್ಲಿ ಇಂದು ಹರಡಿತ್ತು.</p>.<p><strong>ಚುನಾವಣಾ ಫಲಿತಾಂಶ ಶೀಘ್ರ ಪ್ರಕಟಣೆಗೆ ಆಯೋಗದ ಕ್ರಮ</strong></p>.<p><strong>ನವದೆಹಲಿ, ಏ. 18 (ಪಿಟಿಐ)–</strong> ಗೆಲ್ಲುವ ಹಾಗೂ ಸೋಲುವ ಅಭ್ಯರ್ಥಿಗಳ ನಡುವಿನ ಅಂತರ ಒಟ್ಟು ಮತದಾನದ ಶೇಕಡ ಐದಕ್ಕಿಂತ ಹೆಚ್ಚಿದ್ದರೆ ವಿಳಂಬ ಮಾಡದೇ ಫಲಿತಾಂಶ ಪ್ರಕಟಿಸಲು ಚುನಾವಣಾ ಅಧಿಕಾರಿಗೇ ಅಧಿಕಾರ ನೀಡುವ ಮಹತ್ವದ ನಿರ್ಧಾರವನ್ನು ಚುನಾವಣಾ ಆಯೋಗ ಇಂದು ತೆಗೆದುಕೊಂಡಿತು.</p>.<p>ಈ ಅಂತರ ಶೇಕಡ ಐದಕ್ಕಿಂತ ಕಡಿಮೆ ಇದ್ದರೆ ಫಲಿತಾಂಶ ಪ್ರಕಟಕ್ಕೆ ಮುನ್ನ ಚುನಾವಣಾ ಅಧಿಕಾರಿಗಳು ಆಯೋಗದ ಅನುಮತಿ ಪಡೆದುಕೊಳ್ಳಬೇಕು ಎಂದು ಆಯೋಗದ ವಕ್ತಾರರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>