<p><strong>ರೇಷ್ಮೆ ರೈತರಿಗೆ ಲಾಠಿ- ರಾಮಕೃಷ್ಣ ಹೆಗಡೆ ಮನೆಗೆ ದಾಳಿ</strong> </p><p>ಬೆಂಗಳೂರು, ಜ. 11 – ವಿದೇಶಗಳಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಮಾಜಿ ಸಚಿವ ವೈ.ಕೆ. ರಾಮಯ್ಯ ಅವರ ನೇತೃತ್ವದಲ್ಲಿ ಇಂದು ಇಲ್ಲಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದಾಗ ಹಲವಾರು ಮಂದಿ ಗಾಯಗೊಂಡರು.</p><p>ರೇಷ್ಮೆ ಬೆಳೆಗಾರರ ಒಂದು ಗುಂಪು 4–5 ವಾಹನಗಳಲ್ಲಿ ಸಿ.ವಿ.ರಾಮನ್ ರಸ್ತೆಯಲ್ಲಿ ಕೇಂದ್ರ ಸಚಿವ ರಾಮಕೃಷ್ಣ ಹೆಗಡೆ ಅವರ ಮನೆಗೆ ಕಲ್ಲು ತೂರಿ ದಾಂದಲೆ ನಡೆಸಿತು. ಈ ಗಲಾಟೆಯಲ್ಲಿ ಹೆಗಡೆ ಅವರ ಮನೆಯ ಮೊದಲ ಮಹಡಿ ಮತ್ತು ನೆಲಮಹಡಿಯ ಗಾಜುಗಳು ಪುಡಿಪುಡಿಯಾಗಿದ್ದು, ಆವರಣದಲ್ಲಿ ನಿಂತಿದ್ದ ಒಂದು ಕಾರನ್ನು ಜಖಂಗೊಳಿಸಲಾಗಿದೆ.</p><p><strong>ಸುರತ್ಕಲ್ ಗಲಭೆ ತನಿಖೆಗೆ ನ್ಯಾಯಾಂಗ ಆಯೋಗ </strong></p><p>ಮಂಗಳೂರು, ಜ. 11 – ‘ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಮತ್ತು ಇತರ ಕಡೆಗಳಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಹೇಳಿದರು.</p><p>ರಾಜ್ಯದ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರ ಏಕ ಸದಸ್ಯ ಆಯೋಗವೊಂದನ್ನು ಸದ್ಯದಲ್ಲೇ ಇದಕ್ಕಾಗಿ ನೇಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಗಲಭೆಗಳಿಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಮಾಡಿಕೊಡಲು ಆಯೋಗವನ್ನು ಕೇಳಿಕೊಳ್ಳಲಾಗುವುದು ಎಂದು ಅವರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೇಷ್ಮೆ ರೈತರಿಗೆ ಲಾಠಿ- ರಾಮಕೃಷ್ಣ ಹೆಗಡೆ ಮನೆಗೆ ದಾಳಿ</strong> </p><p>ಬೆಂಗಳೂರು, ಜ. 11 – ವಿದೇಶಗಳಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಮಾಜಿ ಸಚಿವ ವೈ.ಕೆ. ರಾಮಯ್ಯ ಅವರ ನೇತೃತ್ವದಲ್ಲಿ ಇಂದು ಇಲ್ಲಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದಾಗ ಹಲವಾರು ಮಂದಿ ಗಾಯಗೊಂಡರು.</p><p>ರೇಷ್ಮೆ ಬೆಳೆಗಾರರ ಒಂದು ಗುಂಪು 4–5 ವಾಹನಗಳಲ್ಲಿ ಸಿ.ವಿ.ರಾಮನ್ ರಸ್ತೆಯಲ್ಲಿ ಕೇಂದ್ರ ಸಚಿವ ರಾಮಕೃಷ್ಣ ಹೆಗಡೆ ಅವರ ಮನೆಗೆ ಕಲ್ಲು ತೂರಿ ದಾಂದಲೆ ನಡೆಸಿತು. ಈ ಗಲಾಟೆಯಲ್ಲಿ ಹೆಗಡೆ ಅವರ ಮನೆಯ ಮೊದಲ ಮಹಡಿ ಮತ್ತು ನೆಲಮಹಡಿಯ ಗಾಜುಗಳು ಪುಡಿಪುಡಿಯಾಗಿದ್ದು, ಆವರಣದಲ್ಲಿ ನಿಂತಿದ್ದ ಒಂದು ಕಾರನ್ನು ಜಖಂಗೊಳಿಸಲಾಗಿದೆ.</p><p><strong>ಸುರತ್ಕಲ್ ಗಲಭೆ ತನಿಖೆಗೆ ನ್ಯಾಯಾಂಗ ಆಯೋಗ </strong></p><p>ಮಂಗಳೂರು, ಜ. 11 – ‘ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಮತ್ತು ಇತರ ಕಡೆಗಳಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಹೇಳಿದರು.</p><p>ರಾಜ್ಯದ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರ ಏಕ ಸದಸ್ಯ ಆಯೋಗವೊಂದನ್ನು ಸದ್ಯದಲ್ಲೇ ಇದಕ್ಕಾಗಿ ನೇಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಗಲಭೆಗಳಿಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಮಾಡಿಕೊಡಲು ಆಯೋಗವನ್ನು ಕೇಳಿಕೊಳ್ಳಲಾಗುವುದು ಎಂದು ಅವರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>