ನವದೆಹಲಿ, ಏ. 18 (ಪಿಟಿಐ, ಯುಎನ್ಐ)– ಹೊಸ ನಾಯಕನ ನೇತೃತ್ವದಲ್ಲಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಯುಕ್ತ ರಂಗಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್(ಐ) ಪಕ್ಷ ಇಂದು ರಾಷ್ಟ್ರಪತಿ ಡಾ. ಶಂಕರದಯಾಳ್ ಶರ್ಮಾ ಅವರಿಗೆ ಪತ್ರ ಬರೆದಿರುವುದರಿಂದ ಸಂಯುಕ್ತ ರಂಗಕ್ಕೆ ಹೊಸ ನಾಯಕನನ್ನು ಆರಿಸಲು ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.